ಬೆಂಗಳೂರು : ಲೋಕಾಯುಕ್ತ ಭೃಷ್ಟಾಚಾರದ ವಿರುದ್ಧ ಕ್ರಮ ಮತ್ತು ಸರಣಿ ರೈತರ ಆತ್ಮಹತ್ಯೆ ಕುರಿತು ಗರಂ ಆಗ್ರುವ ರಾಜ್ಯಪಾಲ ವಜುಭಾಯಿ ವಾಲಾ, ಒಂದು ವಾರದೊಲಗೆ ವಿಸೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 3 ಪುಟಗಳ ಪತೆ ಬರೆದಿದ್ದಾರೆ.
ಲೋಕಾಯುಕ್ತದಲ್ಲಿ ಭೃಷ್ಟಾಚಾರ, ಲೋಕಾ ಪೊಲೀಸರು ತನಿಖೆಗೆ ಮಾಡುತ್ತಿರುವ ವಿಳಂಬದ ಬಗ್ಗೆ ಹೈಕೋರ್ಟ್ ಅಸಮಾಧಾನ, ರೈತರ ಆತ್ಮಹತ್ಯೆ ಮತ್ತಿತರ ಬೆಳವಣಿಗೆಗಳನ್ನು ಗಮನಿಸಿದ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು, ಕೂಡಲೇ ಸ್ಪಷ್ಟನೆ ನೀಡುವಂತೆಯೂ ಸೂಚನೆ ನೀಡಿದ್ದಾರೆ.
ಈ ಪತ್ರದಲ್ಲಿ ಹೆಚ್ಚಿನ ಭಾಗ ರೈತರ ಸರಣಿ ಆತ್ಮಹತ್ಯೆಗೆ ಸಂಬಂಧಿಸಿದ್ದಾಗಿದ್ದು, ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಪರಿಸ್ಥಿತಿ, ಸರಣಿ ಆತ್ಮಹತ್ಯೆಗೆ ಕಾರಣಗಳು, ಅದನ್ನು ತಡೆಗಟ್ಟುವುದು ಏಕೆ ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಜಿಲ್ಲಾವಾರು ವಿವರ ಒದಗಿಸುವಂತೆ ಅವರು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಿಢೀರ್ ರೈತರ ಆತ್ಮಹತ್ಯೆ ಹೆಚ್ಚಾಗಲು ಕಾರಣವೇನು? ಎಂದು ಪ್ರಶ್ನಿಸಿರುವ ಅವರು, ರೈತರ ಸರಣಿ ಆತ್ಮಹತ್ಯೆ ಹಾಗೂ ಬರ ನಿರ್ವಹಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆಯೂ ಮಾಹಿತಿ ನೀಡುವಂತೆ ಕೋರಿದ್ದಾರೆ ಎನ್ನಲಾಗಿದೆ.