ನವದೆಹಲಿ : ಶನಿವಾರ ರಾತ್ರಿ ಪಶ್ಚಿಮ ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಐವರು ಸಾವನ್ನಪ್ಪಿ ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಅವಶೇಷಗಳ ಅಡಿಯಿಂದ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ವರದಿಯಾಗಿದೆ. ಅವಶೇಷಗಶಳ ಅಡಿಯಲ್ಲಿ 10 ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ.
ಕುಸಿದ ಕಟ್ಟಡದ ಸುತ್ತ ಸ್ಥಳ ತೀರಾ ಕಿರಿದಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಜೆಸಿಬಿಗಳನ್ನು ಬಳಸಲು ಕಷ್ಟವಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
8 ಕ್ಕೂ ಹೆಚ್ಚು ಅಗ್ನಿಶಾಮಕದಳದ ತಂಡಗಳು ಮತ್ತು ಎನ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ.