ಮಂಗಳೂರು : ಕರಾವಳಿ ಪ್ರದೇಶದಲ್ಲಿ ಭಾನುವಾರ ಸುರಿತ ಭಾರೀ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಭಾರೀ ಮಳೆಯ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ವಿವಿಧೆಡೆಯಲ್ಲಿ ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ. ಹಲವಾರಿ ಸೇತುವೆಗಳು ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕೆಲವೆಡೆ ಜನರನ್ನು ಸ್ಥಳಾಂತರಿಸಲಾಗಿದೆ.
ಉಡುಪಿಯಿಂದ ಆಗುಂಬೆಗೆ ಆಲಾಡಿ ಹೊರತಾಗಿ ಬಾಕಿ ಎಲ್ಲಾ ಮಾರ್ಗಗಲಲ್ಲಿ ಸೇತುವೆಗಳು ಮುಳಗಿರುವುದರಿಂದ ಸಂಪರ್ಕ ಕಡಿತಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಕುಮಾರಧಾರ ಸೇತುವೆ ಮುಳುಗಡೆಗೊಂಡಿದೆ. ಶ್ರೀ ಕ್ಷೇತ್ರ ಸುಬ್ರಮಣ್ಯ ತಲುಪಲು ಗುಂಡ್ಯ ಮೂಲಕವಾಗಿ ವಾಹನಗಳು ಸಾಗಬೇಕಾಗಿದೆ.