ಬೆಂಗಳೂರು : ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಹೆಚ್ ಡಿ ದೇವೇಗೌಡ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರ ಆತ್ಮಹತ್ಯೆಯ ವಿಷಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ರೈತರ ಆತ್ಮಹತ್ಯೆ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸುವವರೆಗೆ ಉಪವಾಸ ಸತ್ಯಾಗ್ರಹ ನೆಡೆಸುವುದಾಗಿ ತಿಳಿಸಿದರು.
ದೆಹಲಿಯ ಜಂತರ್ ಮಂತರ್ ನಲ್ಲಿ ಸೋಮವಾರದಿಂದ ಉಪವಾಸ ಸತ್ಯಾಗ್ರಹ ನೆಡೆಸುವುದಾಗಿ ತಿಳಿಸಿದರು. ಲೋಕಸಭೆಯಲ್ಲಿ ರೈತರ ಆತ್ಮಹತ್ಯೆ ಕುರಿತು ಚರ್ಚೆಗೆ ನೋಟಿಸ್ ನೀಡಿದ್ದೆ, ಆದರೆ ಚರ್ಚೆಗೆ ಅವಕಾಶ ನೀಡಿಲ್ಲ ಎಂದರು.
ಉಪವಾಸ ಸತ್ಯಾಗ್ರಹಕ್ಕೆ ಬನ್ನಿ ಎಂದು ಯಾರನ್ನೂ ಕರೆಯುವುದಿಲ್ಲ. ರೈತರ ಆತ್ಮಹತ್ಯೆ ವಿಚಾರದ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಗಮನ ಹರಿಸಿಲ್ಲ. ರೈತರಿಗೆ ನ್ಯಾಯ ಸಿಗಬೇಕು ಎನ್ನುವುದೇ ನನ್ನ ಬೇಡಿಕೆ. ಅದ್ದರಿಂದ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿರುವುದಾಗಿ ದೇವೇಗೌಡರು ಹೇಳಿದರು.