ಬೆಂಗಳೂರು : ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ನನ್ನು ವಿಶೇಷ ತನಿಖಾ ತಂಡ ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ.
ಸೋಮವಾರ ಬೆಳಗ್ಗೆ ಎಸ್ಐಟಿ ತಂಡದವರು ಅಶ್ವಿನ್ ರಾವ್ ನನ್ನು ಬಂಧಿಸಿದ್ದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಎಸ್ಐಟಿ ತಂಡ ಅಶ್ವಿನ್ ರಾವ್ನನ್ನು ಬೆಂಗಳೂರಿಗೆ ಕರೆತರುತ್ತಿದೆ.
ಅಶ್ವಿನ್ ರಾವ್ ಲೋಕಾಯಕ್ತ ಡಾ ವೈ ಭಾಸ್ಕರ ರಾವ್ ಅವರ ಮಗ. ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.
ಜುಲೈ 25ರೊಳಗೆ ವಿಚಾರಣೆಗೆ ಹಾಜರಾಗುವಂತೆ ಅಶ್ವಿನ್ ರಾವ್ ಅವರಿಗೆ ಎಸ್ಐಟಿ ನೋಟಿಸ್ ಜಾರಿಗೊಳಿಸಿತ್ತು. ಆದರೆ, ಅಶ್ವಿನ್ ರಾವ್ ಹಾಜರಾಗಿರಲಿಲ್ಲ. ಭಾನುವಾರದಿಂದ ಮೂರು ತಂಡಗಳನ್ನು ರಚಿಸಿ ಅಶ್ವಿನ್ ರಾವ್ಗಾಗಿ ಹುಟುಕಾಟ ನಡೆಸಲಾಗುತ್ತಿತ್ತು.
ಲೋಕಾಯುಕ್ತ ಜಂಟಿ ಆಯುಕ್ತ ಸಯ್ಯದ್ ರಿಯಾಜ್ ಅವರನ್ನು ಭಾನುವಾರ ಬಂಧಿಸಲಾಗಿತ್ತು.