ನವದೆಹಲಿ : ಗಲ್ಲು ಶಿಕ್ಷೆಗೆ ತಡೆ ಕೋರಿ 1993 ಮುಂಬೈ ಸರಣಿ ಬಾಂಬ್ ಸ್ಪೋಟದ ರೂವಾರಿ ಯಾಕೂಬ್ ಮೆಮೂನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ಬುಧವಾರ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ. ಗಲ್ಲು ಶಿಕ್ಷೆ ಖಾಯಂಗೊಳಿಸಿ ತೀರ್ಪು ನೀಡಿದೆ.
ಟಾಡಾ ಕೋರ್ಟ್ ನೀಡಿದ ಗಲ್ಲು ಶಿಕ್ಷೆಯಲ್ಲಿ ಯಾವುದೇ ಲೋಪ ಸುಪ್ರೀಂ ಕೋರ್ಟ್ ಗೆ ಕಂಡುಬರದ ಕಾರಣ ಗಲ್ಲು ಶಿಕ್ಷೆ ಖಾಯಂಗೊಳಿಸಿ ತೀರ್ಪು ನೀಡಿದೆ.
ಇದಲ್ಲೂ ಮೊದಲು ಯಾಕೂಬ್ ಮಹಾರಾಷ್ಟ್ರ ರಾಜ್ಯಪಾಲರ ಬಳಿ ಕ್ಷಮಾದಾನ ಅರ್ಜಿ ಹಾಕಿದ್ದ. ಆ ಅರ್ಜೀ ಸಹ ತಿರಸ್ಕೃತಗೊಂಡಿದೆ.
ಆದರೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಸಲ್ಲಿಸಿರುವ ಕ್ಷಮಾದಾನ ಅರ್ಜಿ ಮಾತ್ರ ಬಾಕಿ ಉಳಿದಿದೆ. ಅದೊಂದು ಮಾತ್ರ ಗಲ್ಲು ಶಿಕ್ಷೆಯಿಂದ ಪಾರಾಗಲು ಕೊನೆಯ ಆಸರೆಯಾಗಿದೆ.