ನವದೆಹಲಿ : ಮುಂಗಾರು ಅಧಿವೇಶನ ಆರಂಭವಾದಂದಿನಿಂದ ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ ಕಾಂಗ್ರೆಸ್ ಸಂಸದರ ವರ್ತನೆ ಇಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ತಾಳ್ಮೆಯನ್ನು ಕೆಡಿಸಿತು.
ಲೋಕಸಭೆ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದೀರೆಂದು 27 ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ 5 ದಿನಗಳವರೆಗೆ ಅಮಾನತುಗೊಳಿಸಿದ್ದಾರೆ.
ಕಲಾಪಕ್ಕೆ ಭಿತ್ತಿಪತ್ರ ಮತ್ತು ಕಪ್ಪು ಪಟ್ಟಿ ತೊಟ್ಟು ಪ್ರತಿಭಟನೆಗೆ ಬರಬೇಡಿ ಎಂಬ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಎಚ್ಚರಿಕೆಯ ನಂತರವೂ ಸಹ ಕಾಂಗ್ರೆಸ್ ಸದಸ್ಯರು, ಭಿತ್ತಿಪತ್ರ ಹಿಡಿದು ಪ್ರತಿಭಟನೆಯಲ್ಲಿ ತೊಡಗಿದ್ದರು.
ಕಾಂಗ್ರೆಸ್ ಸಂಸದರು, ಲೋಕಸಭೆ ಕಲಾಪ ಪ್ರಾರಂಭವಾದ ದಿನದಿಂದ ಪ್ರತಿದಿನ ಕೋಲಾಹಲ ಎಬ್ಬಿಸುತ್ತಿದ್ದರು.
ಬೆಳಗ್ಗೆ ನಡೆದ ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು, ವಿವಾದದಲ್ಲಿ ಸಿಲುಕಿರುವ ಬಿಜೆಪಿ ಮುಖಂಡರ ರಾಜೀನಾಮೆ ಪಡೆಯುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಸ್ಪಷ್ಟ ಪಡಿಸಿದ್ದರು.
ಈ ಮಧ್ಯೆ ದಿನದ ಮಟ್ಟಿಗೆ ಲೋಕಸಭಾ ಕಲಾಪವನ್ನು ಮುಂದೂಡಲಾಯಿತು.