Untitled Document
Sign Up | Login    
Dynamic website and Portals
  
August 26, 2015

ತೀವ್ರಗೊಂಡ ಮಹದಾಯಿ ಹೋರಾಟ, ಹುಬ್ಬಳ್ಳಿ -ಧಾರವಾಡ ಬಂದ್

ಹುಬ್ಬಳ್ಳಿ : ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಹುಬ್ಬಳ್ಳಿ, ಧಾರವಾಡ ಮತ್ತು ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ.

ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ಕರೆಕೊಟ್ಟ ಬಂದ್ ಗೆ ಹುಬ್ಬಳ್ಳಿ-ಧಾರವಾಡ, ಅವಳಿ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ವಕೀಲರು ಕೂಡ ಕೋರ್ಟ್ ಕಲಾಪವನ್ನು ಬಹಿಷ್ಕರಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಗೋವಾ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಕಳಸಾ ಬಂಡೂರಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಸರ್ವಪಕ್ಷ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿತ್ತು. ಆದರೆ ಈ ವಿವಾದ ನ್ಯಾಯಾಧೀಕರಣದಲ್ಲಿ ಇರುವುದರಿಂದ ಕೇಂದ್ರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಅಲ್ಲದೇ ಗೋವಾ, ಮಹಾರಾಷ್ಟ್ರ ಸರ್ವಪಕ್ಷ ನಿಯೋಗ ಕರೆತನ್ನಿ ಎಂದು ಪ್ರಧಾನಿ ಹೇಳಿದ್ದರು. ಇದು ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಹೋರಾಟ ನಡೆಸುತ್ತಿರುವ ರೈತರಿಗೆ ಅಸಮಾಧಾನ ತಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited