ಪಟ್ನಾ : ಪಟ್ನಾ ವಿಮಾನ ನಿಲ್ದಾಣದಲ್ಲಿ ಗುರುವಾರ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಕೇಜ್ರಿವಾಲ್ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದವರು ತಾವು ಅಣ್ಣಾ ಹಜಾರೆ ಬೆಂಬಲಿಗರು ಎಂದು ಹೇಳಿಕೊಂಡಿದ್ದಾರೆ.
ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರವಿಂದ ಕೇಜ್ರೀವಾಲ ಪಟ್ನಾಕ್ಕೆ ತೆರಳಿದ್ದಾರೆ.
ಸೇವಾ ಹಕ್ಕು ಕಾಯ್ದೆ ಬಿಹಾರನಲ್ಲಿ ಜಾರಿ ಆಗಿ ನಾಲ್ಕು ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಜ್ರಿವಾಲ್ ಪಟ್ನಾಕ್ಕೆ ತೆರಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಜಿವಾಲ್ ಅವರು ಮುಖ್ಯ ಅತಿಥಿಯಾಗಿದ್ದಾರೆ.
ಕೆಲವು ದಿನಗಳಿಂದ ನಿತೀಶ್ ಕುಮಾರ್ ಮತ್ತು ಅರವಿಂದ್ ಕೇಜ್ರಿವಾಲ್ ಉತ್ತಮ ಭಾಂಧವ್ಯ ಹೊಂದಿದ್ದಾರೆ. ದೆಹಲಿಯ ಚುನಾವಣೆಯ ಸಮಯದಲ್ಲು ಆಪ್ ಪಕ್ಷದ ಎದುರು ಜೆಡಿಯು ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಿರಲಿಲ್ಲ. ಜೆಡಿಯು ನಾಯಕರು ಆ ಸಂದರ್ಭದಲ್ಲಿ ಆಪ್ ಪರ ಪ್ರಚಾರದಲ್ಲಿ ಭಾಗಿಯಾಗಿದ್ದರು.