Untitled Document
Sign Up | Login    
Dynamic website and Portals
  
September 4, 2015

ಮಂಗಳೂರು-ಚನ್ನೈ ರೈಲು ಅಪಘಾತ: 35 ಪ್ರಯಾಣಿಕರಿಗೆ ಗಾಯ

ಮಧುರೈ : ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್​ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ.

ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ ಮತ್ತಿತರ ರಕ್ಷಣಾ ಸೇವಾ ಸಿಬ್ಬಂದಿಗಳು ಅಪಘಾತದ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರ ರಕ್ಷಣೆಗೆ ಮುಂದಾದರು. ಗಾಯಗೊಂಡವರನ್ನು ವೃದ್ಧಾಚಲಂನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಈ ಅಪಘಾತದಿಂದಾಗಿ ತಮಿಳುನಾಡಿನ ದಕ್ಷಿಣ ಭಾಗದಿಂದ ಚೆನ್ನೈಗೆ ತೆರಳುವ ಹಲವಾರು ರೈಲುಗಳನ್ನು ತಂಜಾವೂರು ಮತ್ತು ಕುಂಭಕೋಣಂ ಮಾರ್ಗದಲ್ಲಿ ಚಲಿಸಲು ಬದಲಿ ಏರ್ಪಾಟು ಮಾಡಿರುವುದಾಗಿ ಮಧುರೈ ರೈಲ್ವೆ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited