Untitled Document
Sign Up | Login    
Dynamic website and Portals
  
September 7, 2015

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆಃ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ನವದೆಹಲಿ : ಏಕ ಶ್ರೇಣಿ-ಏಕ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿವುದಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತೆ ಭರವಸೆ ನೀಡಿದ ನಂತರ, ಮೂವರು ಮಾಜಿ ಸೈನಿಕರು ತಮ್ಮ ಅಮರಣಾಂತರ ಉಪವಾಸ ಸತ್ಯಾಗ್ರಹವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಆದರೆ ನಮ್ಮ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗೋವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಅಮರಣಾಂತ ಉಪವಾಸವನ್ನು ಅಂತ್ಯಗೊಳಿಸಿದ್ದೇವೆ. ಆದರೆ ಸರ್ಕಾರ ನಮಗೆ ನೀಡಿದ ಭರವಸೆಯನ್ನು ಈಡೇರಿಸದಿದ್ದರೆ, ಚಂಡಮಾರುತದ ತರಹ ಪುನಃ ಬರುತ್ತೇವೆ ಎಂದು ನಿವೃತ್ತ ಮೇಜರ್ ಜನರಲ್ ಸತ್ ಬೀರ್ ಸಿಂಗ್ ಎ ಎನ್ ಐ ಗೆ ತಿಳಿಸಿದ್ದಾರೆ.

ನಿವೃತ್ತ ಕರ್ನಲ್ ಪುಷ್ಪೇಂದರ್ ಸಿಂಗ್, ಹವೀಲ್ ದಾರ್ ಮೇಜರ್ ಸಿಂಗ್ ಮತ್ತು ಹವೀಲ್ ದಾರ್ ಅಶೋಕ್ ಸಿಂಗ್ ಆಹಾರ ಸೇವಿಸಿ ತಮ್ಮ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದರು.

ನಮಗೆ ಸಂತೋಷವಾಗಿದೆ, ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದೇವೆ ಎಂದು ನಿವೃತ್ತ ಕರ್ನಲ್ ಪುಷ್ಪೇಂದರ್ ಸಿಂಗ್ ಹೇಳಿದ್ದಾರೆ.

ಒನ್ ರಾಂಕ್ ಒನ್ ಪೆನ್ಶನ್ ಯೋಜನೆ ಘೋಷಣೆಯಾಗುವವರೆಗೂ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಣ ತೊಟ್ಟು, ದೆಹಲಿಯ ಜಂತರ್ ಮಂತರ್ ನಲ್ಲಿ ಸತ್ಯಾಗ್ರಹ ಆರಂಭಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited