Untitled Document
Sign Up | Login    
Dynamic website and Portals
  
September 11, 2015

ಬಿಬಿಎಂಪಿ ಚುನಾವಣೆಃ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜು

ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣಾ ತಯಾರಿ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣಾ ತಯಾರಿ

BW News Bureau : ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆಯುವ ಈ ಚುನಾವಣೆಯಲ್ಲಿ, ಸದಸ್ಯರು ಕೈ ಎತ್ತಿ ಮತ ಚಲಾಯಿಸುವ ಮೂಲಕ ಮೇಯರ್, ಉಪ ಮೇಯರ್ ಹಾಗೂ 12 ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ.

ಚುನಾವಣೆಯಲ್ಲಿ 198 ಪಾಲಿಕೆ ಸದಸ್ಯರ ಜತೆ 62 ಶಾಸಕರು, ವಿಧಾನಪರಿಷತ್‌ ಸದಸ್ಯರು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಮತದಾನದ ಹಕ್ಕು ಪಡೆದಿರುವುದರಿಂದ ಈ ಚುನಾವಣೆ ಮಹತ್ವ ಪಡೆದಿದೆ. ಇದರಲ್ಲಿ ಸಂಖ್ಯಾಬಲ ಪ್ರಮುಖ ಮಾನದಂಡವಾಗಿದೆ. ಪಕ್ಷೇತರರಾಗಿರುವ ಮೂವರು ವಿಧಾನಪರಿಷತ್‌ ಸದಸ್ಯರು, ಮೂವರು ರಾಜ್ಯಸಭೆ ಸದಸ್ಯರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

ಒಟ್ಟಾರೆ, 260 ಸದಸ್ಯರು ಮತದಾನದ ಹಕ್ಕು ಹೊಂದಿದ್ದು 131 ಸರಳ ಬಹುಮತವಾಗಿದೆ. ಅಧಿಕಾರ ಹಿಡಿಯಲು ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಪಕ್ಷೇತರರು ರಚಿಸಿಕೊಂಡಿರುವ ಮೈತ್ರಿಕೂಟ 128, ಬಿಜೆಪಿ-126 ಮತ ಹೊಂದಿವೆ. ಸಂಖ್ಯಾಬಲ ಪ್ರಕಾರ ಮೇಲ್ನೋಟಕ್ಕೆ ಈ ಮಹಾಮೈತ್ರಿಕೂಟ ಯಶಸ್ಸು ಸಾಧಿಸಬಹುದಾದರೂ ತಾವೇ ಅಧಿಕಾರ ಹಿಡಿಯುತ್ತೇವೆ ಎಂದು ಬಿಜೆಪಿ ನಾಯಕರು ಆತ್ಮವಿಶ್ವಾಸದಲ್ಲಿ ಹೇಳುತ್ತಿರುವುದರಿಂದ ಕೊನೆ ಕ್ಷಣದವರೆಗೆ ಕದನ ಕುತೂಹಲ ಉಳಿಯುವಂತಾಗಿದೆ. ಒಂದೊಮ್ಮೆ 260 ಮಂದಿಯೂ ಹಾಜರಾಗದಿದ್ದರೆ ಸಹಜವಾಗಿ ಸಭಾಂಗಣದಲ್ಲಿ ಹಾಜರಿರುವ ಒಟ್ಟು ಸದಸ್ಯರ ಪೈಕಿ ಅತಿ ಹೆಚ್ಚು ಮತ ಪಡೆಯುವವರು ಆಯ್ಕೆಯಾಗಲಿದ್ದಾರೆ.

ಮೈತ್ರಿಕೂಟಕ್ಕೆ ಜಯ ಲಭಿಸಿದರೆ, ಮೇಯರ್ ಸ್ಥಾನ ಕಾಂಗ್ರೆಸ್​ಗೆ, ಉಪ ಮೇಯರ್ ಸ್ಥಾನ ಜೆಡಿಎಸ್​ಗೆ ಹಂಚಿಕೆಯಾದರೆ, 12 ಸ್ಥಾಯಿ ಸಮಿತಿಗಳಲ್ಲಿ 7 ಸ್ಥಾನ ಪಕ್ಷೇತರರಿಗೆ ಸಿಗಲಿದೆ. ಉಳಿದ 5ರಲ್ಲಿ ಕಾಂಗ್ರೆಸ್​ಗೆ 3, ಜೆಡಿಎಸ್​ಗೆ 2 ಸ್ಥಾನ ದಕ್ಕಲಿದೆ ಎಂದು ಮೂಲಗಳು ತಿಳಿಸಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
  • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
  • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited