ಪಟ್ನಾ : ಬಿಹಾರ್ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟಕ್ಕೆ ಭರ್ಜರಿ ಜಯ ಲಭಿಸಿದೆ. ಈ ಮೂಲಕ ನಿತೀಶ್ ಕುಮಾರ್ ಬಿಹಾರ್ ದ ಮುಖ್ಯಮಂತ್ರಿಯಾಗಿ ಮುಂದುವರಿಯಲ್ಲಿದ್ದಾರೆ.
ಚುನಾವಣಾ ಫಲಿತಾಂಶದ ನಂತರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮಾತನಾಡಿ, ಬಿಹಾರದ ಮುಖ್ಯಮಂತ್ರಿಯಾಗಿ ಸಹೋದರ ನಿತೀಶ್ ಕುಮಾರ್ ಮುಂದುವರಿಯಲಿದ್ದು ಮಹಿಳೆಯರ ಕನಸಿನಂತೆ ಬಿಹಾರ ಕಟ್ಟುತ್ತೇವೆ' ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್ ಮಹಾಮೈತ್ರಿಕೂಟ ಕೆಲಸ ಮಾಡಿದೆ. ಈ ಗೆಲುವು ಬಿಹಾರ್ ಜನತೆ ನಮ್ಮಿಂದ ನಿರೀಕ್ಷೆ ಹೊಂದಿದ್ದಾರೆ ಎನ್ನುವುದನ್ನು ತೋರಿಸುತ್ತದೆ. ಇದು ಬಿಹಾರ್ ಜನರ ಗೆಲುವು. ನಾನು ಬಿಹಾರ್ ಜನತೆಗೆ ಶುಭಾಷಯ ತಿಳಿಸುತ್ತೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಅವರಿಗೆ ಫೋನ್ ಮಾಡಿ ಶುಭಾಷಯ ತಿಳಿಸಿದರು. ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಇದು ಜನಾದೇಶ, ಜನಾದೇಶವನ್ನು ನಾವು ಗೌರವಿಸುತ್ತೇವೆ ಎಂದರು.
ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತಎಣಿಕೆ ಭಾನುವಾರ ಬೆಳಗ್ಗೆ 8ಗಂಟೆಯಿಂದ ಆರಂಭವಾಗಿತ್ತು. ಮತಎಣಿಕೆ ಮುಕ್ತಾಯ ಹಂತದಲ್ಲಿದ್ದು ಅದರಲ್ಲಿ ಜೆಡಿಯು ಮೈತ್ರಿ ಕೂಟ 177 ಸ್ಥಾನಗಳಲ್ಲಿ, ಬಿಜೆಪಿ ಮೈತ್ರಿ ಕೂಟ 59 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಆರ್ಜೆಡಿ 80 ಸ್ಥಾನಗಳಲ್ಲಿ ಮುನ್ನಡೆ ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.