ಬೆಂಗಳೂರು : ಹತ್ತು ದಿನಗಳ ಉಭಯ ಸದನಗಳ ಚಳಿಗಾಲದ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ.
ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ರೈತರ ಆತ್ಮಹತ್ಯೆ, ಬರ ಪರಿಹಾರ ಕಾಮಗಾರಿಗಳಿಗೆ ಕಾರ್ಯಗತಗೊಳಿಸಲು ವೈಫಲ್ಯ, ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ವಿರುದ್ಧದ ಆರೋಪ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಬಗೆಗಿನ ವಿವಾದ ಮುಂತಾದ ವಿಷಯಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು.
ರೈತರ ಆತ್ಮಹತ್ಯೆ ಮತ್ತು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ಒದಗಿಸಲು ವಿಫಲವಾದ ಸರ್ಕಾರ ಇವು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬಿಜೆಪಿ ನಾಯಕರು ಇತ್ತೀಚಿಗೆ ವಿವಾದಕ್ಕೆ ಕಾರಣವಾಗಿ ಅವರಿಂದ ಕೊಡಗು, ಮಂಗಳೂರು ಮತ್ತು ಇತರ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾದ ಸರ್ಕಾರದ ಟಿಪ್ಪು ಜನ್ಮಜಯಂತಿ ಅಚರಣೆ ವಿಷಯದಲ್ಲಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಬಹುದು.
ಹಿಂದಿನ ಅಧಿವೇಶನದಲ್ಲಿ ಜೆಡಿಎಸ್ ಪಕ್ಷ ಅಧಿಕೃತ ಪ್ರತಿಪಕ್ಷ ಬಿಜೆಪಿ ಜತೆ ಸೇರಿ ಸರ್ಕಾರದ ವಿರುದ್ಧ ಸಾಕಷ್ಟು ವಿಷಯಗಳಲ್ಲಿ ಹರಿಹಾಯ್ದಿತ್ತು. ಆದರೆ, ಈಗ ಪರಿಸ್ಥಿತಿ ಸ್ವಲ್ಪ ಬದಲಾಗಿದೆ. ಬಿಬಿಎಂಪಿ ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಸಹಜವಾಗಿಯೇ ಜೆಡಿಎಸ್ ನಾಯಕರಿಗೆ ಈಗ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುವುದು ಧರ್ಮ ಸಂಕಟದ ಸಂಗತಿಯೇ ಸರಿ. ಈ ಪರಿಸ್ಥಿತಿಯನ್ನು ಜೆಡಿಎಸ್ ಹೇಗೆ ನಿಭಾಯಿಸುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.