ಹರಿದ್ವಾರ : ಗೋಹತ್ಯೆ ಮಾಡುವವರು ದೇಶದ ದೊಡ್ಡ ಶತೃಗಳು ಎಂದು ಹೇಳಿದ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅಂಥವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ ಎಂದಿದ್ದಾರೆ. ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿಯ ಈ ಹೇಳಿಕೆ ಕಾಂಗ್ರೆಸ್ ಗೆ ಇರಿಸು ಮುರಿಸು ತರುವುದು ಖಚಿತ.
ಗುರುವಾರ ಗೋಪಾಷ್ಟಮಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹರೀಶ್ ರಾವತ್, ಯಾರು ಗೋಹತ್ಯೆ ಮಾಡುತ್ತಾರೋ ಅವರು ಯಾವುದೇ ಸಮುದಾಯದವರಾಗಿರಲಿ ಅವರು ದೇಶದ ದೊಡ್ಡ ಶತೃ. ಅವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ ಎಂದು ಹೇಳಿದ್ದಾರೆ.
ಉತ್ತರಾಖಂಡ್ ದಲ್ಲಿ ಗೋಹತ್ಯೆ ಮಾಡುವವರ ವಿರುದ್ಧ ನಿಷ್ಠುರವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ಗೋ ಸಂರಕ್ಷಣೆಗಾಗಿ ಸರ್ಕಾರ ಎಲ್ಲಾವನ್ನೂ ಮಾಡುತ್ತದೆ ಎಂದು ರಾವತ್ ಹೇಳಿದರು.
ರಾಜ್ಯ ಸರ್ಕಾರ ಈಗಾಗಲೇ ಗೋಹತ್ಯೆಯ ವಿರುದ್ಧ ಪ್ರಸ್ತಾವನೆಯನ್ನು ಸಲ್ಲಿಸಿದೆ. ಗೋಶಾಲೆಗಳಿಗೆ ಜಾಗದ ಜೊತೆ ಗೋವುಗಳಿಗೆ ಮೇವಿನ ವ್ಯವಸ್ಥೆಯನ್ನೂ ಮಾಡುವ ಏಕೈಕ ರಾಜ್ಯ ಉತ್ತರಾಖಂಡ್ ಎಂದು ಅವರು ತಿಳಿಸಿದರು.