ನವದೆಹಲಿ : ಪಾಕಿಸ್ತಾನದೊಂದಿಗೆ ಮಾತುಕತೆಯಲ್ಲಿ 26/11 ಮುಂಬಯಿ ದಾಳಿಯ ಬಗ್ಗೆ ಪ್ರಸ್ತಾಪಿಸಲಾಯಿತು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ನಾವು 26/11 ಮುಂಬಯಿ ದಾಳಿಯ ಬಗ್ಗೆ ವಿಷಯ ಪ್ರಸ್ತಾಪಿಸಿದ್ದೇವೆ ಮತ್ತು ಆರೋಪಿಗಳ ವಿಚಾರಣೆಯನ್ನು ಚುರುಕುಗೊಳಿಸಲು ಪಾಕಿಸ್ತಾನಕ್ಕೆ ಹೇಳಿದ್ದೇವೆ ಎಂದು ಸುಷ್ಮಾ ಸ್ವರಾಜ್ ಹೇಳಿದರು.
ಪಾಕಿಸ್ತಾನದೊಂದಿಗೆ ಶಾಂತಿ ಮತ್ತು ಅಭಿವೃದ್ಧಿ ಮಾತುಕತೆಯನ್ನು ಮತ್ತೆ ಪ್ರಾರಂಭಿಸಲು ಕೇಂದ್ರ ಸರ್ಕಾರ ಉತ್ಸುಕವಾಗಿದ್ದು, ಸಮಗ್ರ ದ್ವಿಪಕ್ಷೀಯ ಮಾತುಕತೆ ಮೂಲಕ ಪಾಕ್ ಜತೆ ಸಂಬಂಧ ಉತ್ತಮಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸುಷ್ಮಾ ಸ್ವರಾಜ್ ತಿಳಿಸಿದರು.
ವಿರೋಧ ಪಕ್ಷಗಳ ಗಲಾಟೆಯ ಮಧ್ಯೆಯೇ ಸುಷ್ಮಾ ಸ್ವರಾಜ್ ತಮ್ಮ ಹೇಳಿಕೆಯನ್ನು ನೀಡಿದರು.