ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿದೆ.
ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಸಿಬಿಐ, ಕಚೇರಿಗೆ ಬೀಗ ಮುದ್ರೆ ಹಾಕಲಾಗಿದೆ. ಬೆಳಗ್ಗೆ ಕಚೇರಿಗೆ ಬಂದ ಕೇಜ್ರಿವಾಲ್ ಮತ್ತು ಇತರ ಆಮ್ ಆದ್ಮಿ ಪಕ್ಷದವರನು ಕಚೇರಿಯ ಒಳಗೆ ಪ್ರವೇಶಿಸದಂತೆ ಸಿಬಿಐ ಅಧಿಕಾರಿಗಳು ತಡೆದರು.
ದೆಹಲಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ನಂತರ ಈ ದಾಳಿ ನಡೆದಿರುವುದರಿಂದ ಇದು ಈ ಪ್ರಕರಣಕ್ಕೆ ಸಂಬಂಧಪಟ್ಟ ದಾಳಿ ಇರಬಹುದೆಂದು ಮೂಲಗಳು ತಿಳಿಸಿವೆ.
ಈ ದಾಳಿಯ ಕುರಿತು ಟ್ವೀಟ್ ಮಾಡಿದ ಕೇಜ್ರಿವಾಲ್, ಮೋದಿ ನನ್ನನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದಿದ್ದರಿಂದ ಈ ರೀತಿ ಹೇಡಿತನ ತೋರಿಸುತ್ತಿದ್ದಾರೆ ಎಂದು ಹೇಳಿ, ಈ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಆರೋಪ ಮಾಡಿದ್ದಾರೆ.