ನವದೆಹಲಿ : ದೆಹಲಿ ಪಟಿಯಾಲ ನ್ಯಾಯಾಲಯದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಕೆಲವು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸೋಮವಾರ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮತ್ತು ಇತರ ಕೆಲವು ಆಪ್ ನಾಯಕರು, ದೆಹಲಿ ಕ್ರಿಕೆಟ್ ಮಂಡಳಿಯಲ್ಲಿ 2013ರ ವರೆಗೆ 13 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅರುಣ್ ಜೇಟ್ಲಿ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿ ಹೇಳಿಕೆಗಳನ್ನು ನೀಡಿದ್ದರು. ಈ ಕಾರಣದಿಂದ ಅರುಣ್ ಜೇಟ್ಲಿ ಅವರು ಸೋಮವಾರ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೆಲವು ಆಪ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಕಳೆದ ವಾರ ಫೇಸ್ ಬುಕ್ ನಲ್ಲಿ ಅರುಣ್ ಜೇಟ್ಲಿ ಅವರು, ಯುಪಿಎ ಆಡಳಿತದ ಸಮಯದಲ್ಲಿ ದೆಹಲಿ ಕ್ರಿಕೆಟ್ ಮಂಡಳಿ ಅವ್ಯವಾಹಾರದ ಕುರಿತು ತನಿಖೆ ನಡೆಸಿದ್ದು, ತಮ್ಮ ವಿರುದ್ಧ ಯಾವುದೇ ಸಾಕ್ಷಿಗಳು ಸಿಗಲಿಲ್ಲ. ಈವರೆಗೆ ಯಾವುದೇ ವೈಯಕ್ತಿಕ ಆರೋಪ ನನ್ನ ವಿರುದ್ಧ ಕೇಳಿಬಂದಿಲ್ಲ ಎಂದಿದ್ದರು.
English Summary : Union Finance Minister Arun Jaitley filed defamation case against Arvind Kejriwal and some other Aam Aadmi Party (AAP) leaders on Monday for accusing him of corruption in Delhi's cricket body, which he headed for 13 years till 2013.