ನವದೆಹಲಿ : ಅಯೋಧ್ಯೆ ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮಭೂಮಿಯಲ್ಲ ಎಂದು ಹಿಂದೂ ಮತ್ತು ಮುಸ್ಲಿಂರಿಗೆ ಗೊತ್ತಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಶ್ರೀರಾಮ ನಮ್ಮ ಹೆಮ್ಮೆ. ಆಯೋಧ್ಯೆ ರಾಮನ ಜನ್ಮಭೂಮಿಯೇ ಹೊರತು ಪ್ರವಾದಿ ಪೈಗಂಬರ್ ಅವರ ಜನ್ಮ ಭೂಮಿಯಲ್ಲ ಎಂದು ರಾಮ್ದೇವ್ ಟ್ವೀಟ್ ಮಾಡಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದಲ್ಲಿ ರಾಮ ಜನ್ಮಭೂಮಿ ಕುರಿತಾಗಿ ನಡೆದ ವಿಚಾರ ಸಂಕಿರಣ ವಿರೋಧಿಸಿ ಎನ್ಎಸ್ಐಯು ಸದಸ್ಯರು ದೆಹಲಿ ವಿಶ್ವವಿದ್ಯಾಲಯ ಕುಲಪತಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ರಾಮ್ದೇವ್ ಈ ಪ್ರತಿಕ್ರಿಯೆ ನೀಡಿದ್ದಾರೆ.