ಗೋವಾ : ಐ ಎಸ್ ಐ ಎಸ್ ಹಸ್ತಾಕ್ಷರವಿದೆ ಎನ್ನಲಾದ ಅನಾಮಧೇಯ ಪತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
ಗೋವಾ ಪೊಲೀಸರು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮತ್ತು ಭಯೋತ್ಪಾದಕ ನಿಗ್ರಹ ದಳಕ್ಕೆ ಈ ಮಾಹಿತಿ ರವಾನಿಸಿದ್ದಾರೆ.
ಪೋಸ್ಟ್ ಕಾರ್ಡ್ ನಲ್ಲಿ ಬರೆಯಲಾದ ಬೆದರಿಕೆ ಕಳೆದ ವಾರ ರಾಜ್ಯ ಸಚಿವಾಲಯಕ್ಕೆ ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಲಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ರಾಜ್ಯ ಪೊಲೀಸ್ ಎಲ್ಲಾ ಸಂಸ್ಥೆಗಳು ಈ ಪತ್ರದ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಆದಷ್ಟು ಶೀಘ್ರದಲ್ಲಿ ಅದರ ಮೂಲ ಹುಡುಕುತ್ತೇವೆ ಎಂದಿದ್ದಾರೆ. ಕಾರ್ಡ್ ನ ಕೆಳಭಾಗದಲ್ಲಿ ಐ ಎಸ್ ಐ ಎಸ್ ಎಂದು ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವ ಕುರಿತು ಈ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.