ಬೆಂಗಳೂರು : ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ.
ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ.
ಈ ಪೈಕಿ ಜನವರಿ 9 ರಂದು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಉಗ್ರ ಸೈಯದ್ ಅನ್ವರ್ ಶಾ ಖಾಸ್ಮಿ ನೀಡಿದ ಸುಳಿವಿನ ಮೇರೆಗೆ 6 ಶಂಕಿತ ಉಗ್ರರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನಾಲ್ವರನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ.
ಮುಂಬೈ, ದೆಹಲಿ, ಬೆಂಗಳೂರು ಮತ್ತು ಹೈದರಾಬಾದ್ ನಗರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಭಯೋತ್ಪಾದನಾ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಮುಖವಾಗಿ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರವನ್ನು ನೀಡಲಾಗಿದ್ದು ದೆಹಲಿ ಪೊಲೀಸ್ ಹಾಗೂ ಭದ್ರತಾ ದಳದವರು ನಗರವಿಡೀ ತೀವ್ರ ನಿಗಾ ವಹಿಸುತ್ತಿದ್ದಾರೆ.