Untitled Document
Sign Up | Login    
Dynamic website and Portals
  
January 23, 2016

ಪರಿಸರದ ಜೊತೆಗೆ ಕಲಿಕೆ ಅರ್ಥಪೂರ್ಣವಾದುದುಃ ಸುರೇಶ್ ಕುಮಾರ್

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಸ್ಯಗಳ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಕುಮಾರ್ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಸ್ಯಗಳ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಕುಮಾರ್

Sullia : ಪರಿಸರ ಹಾಗೂ ಮಕ್ಕಳ ನಡುವಿನ ಗೆಳೆತನದ ಕಲಿಕೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ. ಒಂದು ಶಾಲೆಯೆಂದರೆ ಹೀಗೂ ಇರಬಹುದೇ! ಎಂಬ ಅಚ್ಚರಿ ಸ್ನೇಹ ಶಾಲೆಯನ್ನು ನೋಡಿದಾಗ ಉಂಟಾಗುತ್ತದೆ. ಈ ರಾಜ್ಯ ಇಡೀ ಸುತ್ತಿರುವ ನನಗೆ ಸ್ನೇಹ ಶಾಲೆಯಂತಹ ಶಾಲೆ ಇನ್ನೊಂದು ಕಂಡಿಲ್ಲ. ಇಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆಲ್ಲರಿಗೂ ಉತ್ತಮ ಭವಿಷ್ಯವಿದೆ. ನಮ್ಮ ಮುಂದಿರುವ ಸವಾಲುಗಳನ್ನು ಛಲದಿಂದ ಎದುರಿಸಿ ಸಾಧನೆ ಮಾಡಿ ಎಂದು ಮಾಜಿ ಕಾನೂನು ಸಚಿವ, ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಹೇಳಿದರು.

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಸ್ಯಗಳ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಸಂಸ್ಥೆಯ ಅಧ್ಯಕ್ಷರಾದ ಡಾ| ಚಂದ್ರಶೇಖರ ದಾಮ್ಲೆ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸುರೇಶ್ ಕುಮಾರ್ ಶಾಲಾ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ಪ್ರಸನ್ನ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited