Untitled Document
Sign Up | Login    
Dynamic website and Portals
  
February 17, 2016

ರಾಜಭವನದ ಅಂಗಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಚ್ ವಿವಾದ

ಬೆಂಗಳೂರು : ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ರಾಜಭವನದ ಅಂಗಳ ತಲುಪಿದೆ. ಲಕ್ಷಾಂತರ ರೂ. ಮೌಲ್ಯದ ಕೈಗಡಿಯಾರವನ್ನು ಉಡುಗೊರೆ ರೂಪದಲ್ಲಿ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಭ್ರಷ್ಟಾಚಾರ ಎಸಗಿದ್ದಾರೆ. ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಆರ್​ ಟಿ ಐ ಕಾರ್ಯಕರ್ತ ಎಸ್. ಭಾಸ್ಕರನ್ ಎಂಬುವವರು ಮಂಗಳವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಖಾಸಗಿ ದೂರು ಸಲ್ಲಿಸಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ರಾಜ್ಯಪಾಲರಿಗೆ ದಾಖಲೆಗಳನ್ನು ನೀಡಿ ಅನುಮತಿ ಪಡೆದುಕೊಳ್ಳಬೇಕು.

ದುಬಾರಿ ವಾಚ್ ಅನ್ನು ಉಡುಗೊರೆತಾಗಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದನ್ನು ತಮ್ಮ ಆಸ್ತಿ ವಿವರದಲ್ಲಿ ನಮೂದಿಸಬೇಕಾಗಿತ್ತು. ಆದರೆ ಈ ವಾಚ್ ಅನ್ನು ಆಸ್ತಿ ವಿವರದಲ್ಲಿ ನಮೂದಿಸಿಲ್ಲವಾದ್ದರಿಂದ ಸಿಎಂ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ
ಭಾಸ್ಕರನ್ ಕೋರಿದ್ದಾರೆ.

ವಾದ ಎಬ್ಬಿಸಿರುವ ದುಬಾರಿ ವಾಚ್ ಸಂಬಂಧ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡುವುದು ಹಿಟ್ ಆಂಡ್ ರನ್ ಕೇಸಿನಂತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ದಾಖಲೆ ಇಲ್ಲದೆ ಯಾರ ವಿರುದ್ಧವೂ ಆರೋಪ ಮಾಡುವುದಿಲ್ಲ. ಹಿಟ್ ಆಂಡ್ ರನ್ ಜಾಯಮಾನ ನನ್ನದಲ್ಲ. ಹಗರಣ ಬಯಲಿಗೆ ಬಂದಾಗ ಪಲಾಯನ ಮಾಡುವುದು ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಗುಣ ಎಂದು ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮುಖ್ಯಮಂತ್ರಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇನೆ. ಅಲ್ಲಿಯವರೆಗೆ ಅವರು ತಾಳ್ಮೆಯಿಂದ ಕಾಯಲಿ ಎಂದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited