Untitled Document
Sign Up | Login    
Dynamic website and Portals
  
March 9, 2016

ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಗೆ ಚಾಲನೆ

'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಚಾಲನೆ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಚಾಲನೆ

ಬೆಂಗಳೂರು : ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರವು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಗೊಳಿಸಿರುವ ಸಾಂತ್ವನ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಪೊಲೀಸರು, ಸಾರ್ವಜನಿಕರು, ಖಾಸಗಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ ವೈದ್ಯರ ಪಾತ್ರ ಬಹಳ ಮುಖ್ಯ. ಯೋಜನೆಗೆ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ ಎಂದರು.

ಸಾಂತ್ವನ ಯೋಜನೆಗೆ ಅಪಘಾತದಲ್ಲಿ ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್‌ ಹೆಸರು ನಾಮಕರಣ ಮಾಡಿರುವುದು ಸೂಕ್ತವಾಗಿದೆ. ಹೀಗಾಗಿ ಯೋಜನೆಯಲ್ಲಿರುವ ಮುಖ್ಯಮಂತ್ರಿ ಪದ ತೆಗೆದು ಹರೀಶ್‌ ಹೆಸರಿಗೆ ಅರ್ಥಪೂರ್ಣವಾಗಿ ಹೊಂದಿಕೆಯಾಗುವ ಹೆಸರು ಸೇರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸಲಹೆ ನೀಡಿದ್ದಾರೆ.

ಆರೋಗ್ಯ ಇಲಾಖೆ ಹೊರ ತಂದಿರುವ ಹೊಸ ಯೋಜನೆಯಲ್ಲಿ ಅಪಘಾತಕ್ಕೊಳಗಾದ ವ್ಯಕ್ತಿ 48 ಗಂಟೆಗಳ ಅವಧಿಯಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೂ ರು. 25 ಸಾವಿರದವರೆಗೆ ಚಿಕಿತ್ಸಾ ನೆರವು ಒದಗಿಸಲಾಗುವುದು. ಹಣ ನಾವು ಕೊಡುವಾಗ ಚಿಕಿತ್ಸೆ ಒದಗಿಸಲು ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಹೇಳಿದೆ.

ಕಾರ್ಯಕ್ರಮದಲ್ಲಿ ಸಚಿವರಾದ ಯು.ಟಿ.ಖಾದರ್‌, ಡಾ.ಜಿ.ಪರಮೇಶ್ವರ್‌, ಶರಣ ಪ್ರಕಾಶ ಪಾಟೀಲ್‌, ಮೃತ ಹರೀಶ್‌ ತಾಯಿ ಗೀತಾ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ, ಆರೋಗ್ಯ ಇಲಾಖೆ ಕಾರ್ಯಕಾರಿ ನಿರ್ದೇಶಕ ಡಾ.ಪಿ.ಬೋರೇಗೌಡ ಇತರರು ಉಪಸ್ಥಿತರಿದ್ದರು.

ಫೆ.16 ರಂದು ನೆಲಮಂಗಲದ ಬೇಗೂರ್ ಗೇಟ್ ಬಳಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿತ್ತು. ಅಪಘಾತದಲ್ಲಿ ಬೈಕ್ ಸವಾರ ಹರೀಶ್ ಎಂಬ ಯುವಕನ ದೇಹ ಎರಡು ಭಾಗವಾಗಿ ರಸ್ತೆಯಲ್ಲಿ ಬಿದ್ದಿತ್ತು. ದೇಹ ಎರಡು ತುಂಡಾದರೂ ಎರಡೂ ಕೈಯನ್ನು ಬಡಿಯುತ್ತ ಜೀವ ಉಳಿಸಿ ಎಂದು ಕೂಗಿಕೊಂಡು ತನ್ನ ಅಂಗಾಂಗ ದಾನ ಮಾಡಲು ಸಹಾಯ ಮಾಡುವಂತೆ ಅಂಗಾಲಾಚುತ್ತಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿತ್ತು. ಯುವಕನ ಕೊನೆಯಾಸೆಯಂತೆಯೇ ಆತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನ್ನಲ್ಲೂ ಸಾರ್ಥಕತೆಯನ್ನು ಮೆರೆದಿದ್ದ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Health

ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ
  • ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ
  • ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ’ದ ಸಮಾರೋಪ ಸಮಾರಂಭ
  • ಉದ್ಯಾನ ವನದಲ್ಲಿ ಉದಯರಾಗ
  • ರಾಜ್ಯದಲ್ಲಿ ಆಹಾರ ಆಯೋಗ ರಚನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited