ಬೆಂಗಳೂರು : ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್, ಶ್ರೀ ರಾಮಚಂದ್ರಾಪುರ ಮಠದ 34ನೇ ಶಂಕರಾಚಾರ್ಯರಾದ ಶ್ರೀ ರಾಮಚಂದ್ರಭಾರತೀ ಸ್ವಾಮೀಜಿಯವರ ಆರಾಧನಾ ಮಹೋತ್ಸವವು ಬುಧವಾರ, ಮಾರ್ಚ್ 23 ರಂದು ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿರುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ಬೆಳಗ್ಗೆ ಶ್ರೀಕರಾರ್ಚಿತ ಪೂಜೆಯ ನಂತರ ತೀರ್ಥರಾಜಪೂಜೆ ಇತ್ಯಾದಿ ಧಾರ್ಮಿಕ ವಿಧಿವಿಧಾನದೊಂದಿಗೆ ಆರಾಧನಾ ಮಹೋತ್ಸವ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಆರಾಧನೆಯ ನಿಮಿತ್ತ ಧರ್ಮಸಭೆ - ಸಂಸ್ಮರಣೆ ಹಾಗೂ ಪೂಜ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಆಶಿರ್ವಚನ ಕಾರ್ಯಕ್ರಮಗಳು ಸಂಪನ್ನವಾಗಲಿವೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.