Untitled Document
Sign Up | Login    
Dynamic website and Portals
  
April 3, 2016

ಉತ್ತರ ಪ್ರದೇಶದಲ್ಲಿ ಎನ್.ಐ.ಎ ಅಧಿಕಾರಿಯ ಬರ್ಬರ ಹತ್ಯೆ

ಲಖ್ನೌ : ಉತ್ತರ ಪ್ರದೇಶದ ಬಿಜ್‌ ನೂರ್‌ನಲ್ಲಿ ಬೈಕ್‌ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಡೆಪ್ಯುಟಿ ಎಸ್‌.ಪಿ ಮಹಮದ್‌ ತಂಝಿಲ್‌ ಎನ್ನುವವರು ಹತ್ಯೆಗೀಡಾಗಿದ್ದು , ತಡ ರಾತ್ರಿ 1.30 ರ ವೇಳೆಗೆ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಕೆ ಸಂಬಂಧಿಕರೊಬ್ಬರ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಹಮದ್‌ ತಂಝಿಲ್‌ ಅವರು ಸಾವನ್ನಪ್ಪಿದ್ದು ,ಗಂಭೀರವಾಗಿ ಗಾಯಗೊಂಡಿರುವ ಅವರ ಪತ್ನಿ ನೊಯ್ಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಂಝಿಲ್‌ ಅವರು ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮದುವೆ ಕಾರ್ಯಕ್ರಮಕ್ಕಾಗಿ ಹುಟ್ಟೂರಿಗೆ ಆಗಮಿಸದ್ದರು. ಅವರು ಎನ್‌.ಐ.ಎಯ ಹಲವು ತನಿಖೆ ಗಳಲ್ಲಿ ಭಾಗಿಯಾಗಿದ್ದರು. ತಂಝಿಲ್‌ ಅವರು ಪಠಾಣ್ ಕೋಟ್ ಉಗ್ರರ ದಾಳಿಯ ತನಿಖಾ ತಂಡದಲ್ಲಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಎನ್.ಐ.ಎ ಡಿಜಿ, ತಂಝಿಲ್ ಅವರು ಪಠಾಣ್‌ ಕೋಟ್‌ ಉಗ್ರರ ದಾಳಿಯ ತನಿಖಾ ತಂಡದಲ್ಲಿದ್ದರು ಎನ್ನುವುದನ್ನು ಅಲ್ಲಗಳೆದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited