ಬೆಂಗಳೂರು : ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ವಕೀಲ ಚಿದಾನಂದ ಅರಸ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಮೂರ್ತಿ ಸುಬ್ರೋ ಕಮಲ್ ಮುಖರ್ಜಿ ಮತ್ತು ನ್ಯಾ. ರವಿ ಮಳೀಮಠ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಪ್ರಕರಣಗಳನ್ನು ವರ್ಗಾಯಿಸುವುದಕ್ಕೆ ಮಧ್ಯಂತರ ತಡೆ ವಿಧಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮುಂದಿನ ಆದೇಶದ ವರೆಗೆ ಪ್ರಕರಣಗಳನ್ನು ವರ್ಗಾಯಿಸ ಬಾರದು ಎಂದು ಕೋರ್ಟ್ ತನ್ನ ಆದೇಶನೀಡಿದೆ.
ಎಸಿಬಿ ರಚನೆ ಮಾಡಿದಾಗಿನಿಂದ ವಿವಾದಕ್ಕೀಡಾಗಿರುವ ರಾಜ್ಯ ಸರ್ಕಾರಕ್ಕೆ ಕೋರ್ಟ್ ಆದೇಶ ಇನ್ನೊಂದು ಹಿನ್ನಡೆಯಾದಂತಾಗಿದೆ.