ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ, ಸಂಸದ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರನ್ನಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
ಪ್ರಹ್ಲಾದ್ ಜೋಶಿ ಅವರಿಂದ ತೆರವಾಗುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇದೀಗ 4ನೇ ಬಾರಿಗೆ ಬಿಎಸ್ ವೈ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅರುಣ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಬಿಎಸ್ ವೈ ಹೆಸರನ್ನು ಘೋಷಿಸಿದರು.
ಶಿವಮೊಗ್ಗದ ಹಾಲಿ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ತಮಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕೆಂದು ಆಗ್ರಹಿಸಿದ್ದರು. ಅಲ್ಲದೇ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಂಡ ಬಳಿಕ ರಾಜ್ಯಾಧ್ಯಕ್ಷ ಹುದ್ದೆಗೆ ಕಸರತ್ತು ಮುಂದುವರಿದಿತ್ತು.