ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ, ಸಂಸದ, ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪನವರ ಮನೆಗೆ ಬಿಜೆಪಿ ನಾಯಕರ ದಂಡೇ ಹರಿದು ಬಂದಿದೆ. ಹೂಗುಚ್ಛ ನೀಡಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರು. ಕೆ.ಎಸ್.ಈಶ್ವರಪ್ಪ, ಬಿಎನ್ ಬಚ್ಚೇಗೌಡ ಸೇರಿದಂತೆ ನೂರಾರು ಬಿಜೆಪಿ ಮುಖಂಡರು ಬಿ.ಎಸ್.ವೈ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಇದಕ್ಕೂ ಮುದಲು ಬಿ.ಎಸ್.ಯಡಿಯೂರಪ್ಪ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಾ ಕಚೇರಿಗೆ ಭೇಟಿ ನೀಡಿ ಹಿರಿಯ ಆರ್.ಎಸ್.ಎಸ್ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದರು.
ಏ.14ರ ಬೆಳಗ್ಗೆ 11.30ಕ್ಕೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವುದಾಗಿ ಯಡಿಯೂರಪ್ಪ ಆರ್.ಎಸ್.ಎಸ್ ನಾಯಕರ ಭೇಟಿ ನಂತರ ಸುದ್ದಿಗಾರರಿಗೆ ತಿಳಿಸಿದರು.