ನವದೆಹಲಿ : ನೇಪಾಳದ ರಾಜಧಾನಿ ಕಠ್ಮಂಡು ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ.
ನೇಪಾಳ ರಾಜಧಾನಿ ಕಠ್ಮಂಡುವಿನ ಸಮೀಪದಲ್ಲಿರುವ ಲಲಿತ್ ಪುರ್ ಎಂಬ ಪ್ರದೇಶದಲ್ಲಿ ಭೂಂಕಪನದ ಕೇಂದ್ರ ಬಿಂದು ಎಂದು ತಿಳಿದುಬಂದಿದ್ದು, ಈ ವರೆಗೂ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಇನ್ನು ಭಾರತದ ರಾಜಧಾನಿ ದೆಹಲಿ ಮತ್ತು ಹರ್ಯಾಣದಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತಗೊಂಡ ಜನ ಮನೆಗಳಿಂದ ಹೊರಗೆ ಓಡಿ ಬಂದ ದೃಶ್ಯಗಳು ಸಾಮಾನ್ಯವಾಗಿತ್ತು.
ಜಮ್ಮು ಮತ್ತು ಕಾಶ್ಮೀರ ,ಚಂಧೀಘಡ ಸೇರಿದಂತೆ ಉತ್ತರ ಭಾರತದಾಧ್ಯಂತ ಕಂಪನದ ಅನುಭವ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ನಾಲ್ಕು ಗಂಟೆ ಒಂದು ನಿಮಿಷಕ್ಕೆ 2 ರಿಂದ 3 ಬಾರಿ 2ನಿಮಿಷಕ್ಕೂ ಹೆಚ್ಚು ಕಾಲ ಭೂಮಿ ಕಂಪಿಸಿದೆ ಎನ್ನಲಾಗಿದೆ.