Untitled Document
Sign Up | Login    
Dynamic website and Portals
  
April 11, 2016

ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆವರೆಗೆ ಸುರಂಗ ಮೆಟ್ರೋಗೆ ಚಾಲನೆ

BW News Bureau : ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಸುರಂಗ ಮಾರ್ಗದಲ್ಲಿ ರೈಲು ಸಂಚಾರ ಪ್ರಾರಂಭಿಸಲು ಅನುಮತಿ ಕೋರಿ ನಿಗಮವು ಸುರಕ್ಷತಾ ಆಯುಕ್ತರಿಗೆ ಮಾರ್ಚ್‌ 25ರಂದು ಅರ್ಜಿ ಸಲ್ಲಿಸಿತ್ತು. ಪರಿಶೀಲನೆ ನಡೆಸಿದ ನಂತರ ಸುರಕ್ಷತಾ ಆಯುಕ್ತರು ಇಂದು ಸಂಚಾರಕ್ಕೆ ಅನುಮತಿ ನೀಡಿದ್ದಾರೆ.

ಮೆಟ್ರೊ ಮಾರ್ಗಗಳಲ್ಲಿ ವಾಣಿಜ್ಯ ಸಂಚಾರ ಪ್ರಾರಂಭಿಸಲು ರೈಲ್ವೆ ಇಲಾಖೆಗೆ ಸೇರಿದ 2 ಸಂಸ್ಥೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ. ಆ ಎರಡು ಸಂಸ್ಥೆಗಳೆಂದರೆ ‘ರಿಸರ್ಚ್‌ ಡಿಸೈನ್ಸ್‌ ಅಂಡ್‌ ಸ್ಟಾಂಡರ್ಡ್ಸ್ ಆರ್ಗನೈಸೇಷನ್‌’ (ಆರ್‌ಡಿಎಸ್‌ಒ) ಮತ್ತು ಮೆಟ್ರೊ ರೈಲು ಸುರಕ್ಷತಾ ಆಯುಕ್ತರ (ಎಂಸಿಆರ್‌ಎಸ್‌) ಕಚೇರಿ.

ಆರ್‌.ಡಿ.ಎಸ್‌.ಒ ತಂತ್ರಜ್ಞರು ಪರಿಶೀಲಿಸಿ ಈಗಾಗಲೇ ಪ್ರಮಾಣಪತ್ರ ನೀಡಿದ್ದಾರೆ. ಬೇರೆ ಬೇರೆ ವೇಗದಲ್ಲಿ ರೈಲು ಹೇಗೆ ಓಡಲಿದೆ, ಹಳಿಗಳ ಮೇಲೆ ಉಂಟಾಗುವ ಒತ್ತಡದ ಪರಿಣಾಮಗಳು– ಇವೇ ಮೊದಲಾದ ಅಂಶಗಳ ಬಗ್ಗೆ ಆರ್‌.ಡಿ.ಎಸ್‌.ಒದ ತಂತ್ರಜ್ಞರು ಪರಿಶೀಲಿಸಿದ್ದರು. ಸುರಕ್ಷತಾ ಆಯುಕ್ತರು ಸುರಕ್ಷತೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಪರಿಶೀಲಿಸಿ ಅನುಮತಿ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Travel & Leisure

ಬೆಂಗಳೂರಿನ ಕೆಐಎನಲ್ಲಿ ದೇಶದ ಮೊದಲ ಆಧಾರ್ ಸಕ್ರಿಯ ವ್ಯವಸ್ಥೆ ಅಳವಡಿಕೆ
  • ಬೆಂಗಳೂರಿನ ಕೆಐಎನಲ್ಲಿ ದೇಶದ ಮೊದಲ ಆಧಾರ್ ಸಕ್ರಿಯ ವ್ಯವಸ್ಥೆ ಅಳವಡಿಕೆ
  • 2018ರ ಅಂತ್ಯದ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಆಧಾರ್ ವ್ಯವಸ್ಥೆಯನ್ನು ಸಕ್ರಿಯವಾಗಿ ಬಳಸಿಕೊಳ್ಳವ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ
  • ಮೈಸೂರು ದಸರಾಕ್ಕೆ ಗೋಲ್ದನ್ ಚಾರಿಯಟ್ ಲಕ್ಸುರಿ ಟ್ರೇನ್
  • ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited