ನವದೆಹಲಿ : ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 723 ಕೋಟಿ ನೆರವು ನೀಡುವುದಾಗಿ ಘೋಷಿಸಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ನೆರವು ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ
ಬರದಿಂದ ತತ್ತರಿಸಿರುವ ಕರ್ನಾಟಕ ಹಾಗೂ ಪ್ರವಾಹ ಎದುರಿಸಿದ್ದ ಪುದುಚೇರಿ ಮತ್ತು ಅರುಣಾಚಲ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ನೀಡಿದ್ದ ವರದಿ ಆಧರಿಸಿ ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ 723.23 ಕೋಟಿ ನೆರವು ಘೋಷಿಸಿರುವ ಕೇಂದ್ರ ಸರ್ಕಾರ, ಪುದುಚೇರಿಗೆ 35.14 ಕೋಟಿ ರೂಪಾಯಿ ಹಾಗೂ ಅರುಣಾಚಲ ಪ್ರದೇಶಕ್ಕೆ 84.33 ಕೋಟಿ ರೂಪಾಯಿ ನೆರವು ಪ್ರಕಟಿಸಿದೆ.