Untitled Document
Sign Up | Login    
Dynamic website and Portals
  
April 23, 2016

ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

ವಿಶ್ವಸಂಸ್ಥೆ : ಹಸಿರು ಮನೆ ಅನಿಲ ಉತ್ಪಾದನೆ ಕಡಿಮೆ ಮಾಡಲು ಹಲವು ನಿಯಮಗಳನ್ನು ಒಳಗೊಂಡಿರುವ ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಭಾರತ, ಅಮೆರಿಕ, ಚೀನಾ ಸೇರಿದಂತೆ ಒಟ್ಟು 175 ರಾಷ್ಟ್ರಗಳು ಸಹಿ ಹಾಕಿವೆ.

ಈ ಮೂಲಕ ಜಾಗತಿಕ ತಾಪಮಾನವನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ತುರ್ತು ಅಗತ್ಯವನ್ನು ಸ್ಪಷ್ಟಪಡಿಸಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಮಾರಂಭದಲ್ಲಿ 175 ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಸಾಗರ ಸಮಾವೇಶದ ಕಾನೂನುಗಳಿಗೆ 119 ರಾಷ್ಟ್ರಗಳು ಸಹಿ ಹಾಕಿದ್ದವು.

ಒಪ್ಪಂದ ಯಶಸ್ವಿಯಾಗಿ ಕಾರ್ಯಗತವಾಗಲು, ಹಸಿರುಮನೆ ಅನಿಲ ಹೊರಸೂಸುವಿಕೆಗೆ ಕಾರಣವಾಗಿರುವ ಕನಿಷ್ಠ 55 ದೇಶಗಳು ಒಪ್ಪಂದಕ್ಕೆ ಸಹಿ ಹಾಕಿರುವ ಅಂಶಗಳನ್ನು ಜಾರಿಗೊಳಿಸಬೇಕಿದೆ.

ದಿನದಿಂದ ದಿನಕ್ಕೆ ಹೆಚ್ಚಿತ್ತಿರುವ ಜಾಗತಿಕ ತಾಪಮಾನವನ್ನು ತಗ್ಗಿಸುವುದಕ್ಕೆ 2015 ರ ಡಿಸಂಬರ್ ನಲ್ಲಿ ನಡೆದ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯಲ್ಲಿ ಜಾಗತಿಕ ನಾಯಕರು ಕರೆ ನೀಡಿದ್ದರು. ಇದರ ಭಾಗವಾಗಿ 190ಕ್ಕೂ ಹೆಚ್ಚು ದೇಶಗಳು ಸೇರಿ ಹವಾಮಾನ ಬದಲಾವಣೆ ಬಗೆಗಿನ ಪ್ಯಾರಿಸ್‌ ಒಪ್ಪಂದವನ್ನು ರೂಪಿಸಿದ್ದವು. ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಚೌಕಟ್ಟಿನ ಆಧಾರದಲ್ಲಿ ಪ್ರಬಲ ಮತ್ತು ಸುಸ್ಥಿರವಾದ ಹವಾಮಾನ ಕರಾರು ರೂಪಿಸಬೇಕು ಎಂಬುದು ಭಾರತದ ಒತ್ತಾಯವಾಗಿತ್ತು. ಭಾರತ ಎತ್ತಿರುವ ಎಲ್ಲ ಮುಖ್ಯ ಕಾಳಜಿ ಮತ್ತು ನಿರೀಕ್ಷೆಗಳನ್ನು ಒಪ್ಪಂದ ಒಳಗೊಂಡಿದೆ.

ಈ ವೇಳೆ ಮಾತನಾಡಿರುವ ಬಾನ್ ಕಿ ಮೂನ್, ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಭೂಮಿಯ ಭವಿಷ್ಯಕ್ಕಾಗಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಒಟ್ಟಾಗಿವೆ. ನಾವು ಸಮಯದೊಂದಿಗೆ ಪೈಪೋಟಿಗೆ ಬಿದ್ದಿದ್ದೇವೆ. ಆದಷ್ಟು ತ್ವರಿತವಾಗಿ ನಾವು ಒಪ್ಪಂದವನ್ನು ಜಾರಿಗೆ ತರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited