Untitled Document
Sign Up | Login    
Dynamic website and Portals
  
April 24, 2016

ಮನ್ ಕೀ ಬಾತ್: ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ಮೋದಿ ಕರೆ

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ದೇಶಾದ್ಯಂತ ಭೀಕರ ಬರಗಾಲ ಸಂಭವಿಸಿದ್ದು, ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ನೀರನ್ನು ವ್ಯರ್ಥ ಮಾಡದೆ, ನೀರನ್ನು ಸಂರಕ್ಷಿಸಿ. ಮಳೆ ನೀರು ಕೊಯ್ಲನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಪ್ರತಿ ಹಳ್ಳಿಗಳಲ್ಲೂ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ. ಇದರಿಂದ ಅಂತರ್ಜಲದ ಮಟ್ಟ ಹೆಚ್ಚಾಗುತ್ತದೆ ಎಂದ ಅವರು, ಗುಜರಾತ್ ನ ಅಹ್ಮದ್ ನಗರದಲ್ಲಿ ರೈತರು ನೀರಿಗಾಗಿ ಅಳವಡಿಸಿಕೊಂಡಿರುವ ಮಳೆ ನೀರು ಕೊಯ್ಲು ಪದ್ಧತಿಯ ಬಗ್ಗೆ ಪ್ರಸ್ತಾಪಿಸಿದರು, ಇಲ್ಲಿನ ರೈತರು ಬೇಸಿಗೆ ಕಾಲವನ್ನು ಗಮನದಲ್ಲಿಟ್ಟುಕೊಂಡು ಈ ಹಿಂದೆಯೇ ನೀರನ್ನು ಸಂರಕ್ಷಿಸುವ ಸಲುವಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅನುಸರಿಸುತ್ತಿದ್ದರು ಎಂದು ತಿಳಿಸಿದರು.

ಈ ಬಾರಿ ಮಾನ್ಸೂನ್ ಮಳೆ ಶೇ.106-110ರಷ್ಟು ಆಗುವ ಸಂಭವವಿದೆ ಎಂದು ಹೇಳಲಾಗುತ್ತಿದೆ. ಇದು ಸ್ವಲ್ಪಮಟ್ಟಿಗೆ ನಿರಾಳ ತಂದರೂ, ಮುಂಬರುವ ದಿನಗಳ ಬಗ್ಗೆ ಚಿಂತಸಬೇಕು. ಮೊದಲೇ ನೀರಿನ ಸಂರಕ್ಷಣೆಯಲ್ಲಿ ಎಚ್ಚರವಹಿಸಬೇಕಾದ ಅವಶ್ಯಕತೆಯಿದೆ. ಈ ಹಿನ್ನಲೆಯಲ್ಲಿನೀರಿನ ಸಂರಕ್ಷಣೆಯಲ್ಲಿ ನಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಗಳನ್ನು ನಾವು ಮಾಡಬೇಕು. ಮಾನ್ಸೂನ್ ಮಳೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.

ಪ್ರವಾಸೊದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು, ಸಿಂಹಾಸ್ಥ ಕುಂಭ ಮೇಳದ ಫೋಟೋಗಳನ್ನು ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಇಂತದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಪ್ರೋತ್ಸಾಹಿಸಬೇಕು. ಇನ್ನಷ್ಟು ಜನರು ಕುಂಭ ಮೇಳದ ಬಗ್ಗೆ ತಿಳಿದುಕೊಳ್ಳುವಂತೆ ಮಾಡಬೇಕು. ಇದಕ್ಕಾಗಿ ಸರ್ಕಾರ ಫೋಟೋ ಸ್ಪರ್ಧೆಯನ್ನು ಏರ್ಪಡಿಸಬೇಕು. ನಮ್ಮ ಸಂಸ್ಕೃತಿಯ ವೈಶಿಷ್ಟ್ಯದ ಬಗ್ಗೆ ತಿಳಿಸಬೇಕು ಎಂದು ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited