Untitled Document
Sign Up | Login    
Dynamic website and Portals
  
May 1, 2016

ಉತ್ತರಾಖಂಡದಲ್ಲಿ ಕಾಡ್ಗಿಚ್ಚು: ನಿಯಂತ್ರಿಸದಿದ್ದಲ್ಲಿ ಇಡೀ ಉತ್ತರ ಭಾರತ ವ್ಯಾಪಿಸುವ ಅಪಾಯ

ಉತ್ತರಾಖಂಡದಲ್ಲಿ ಕಾಡ್ಗಿಚ್ಚು ( ಸಂಗ್ರಹ ಚಿತ್ರ ) ಉತ್ತರಾಖಂಡದಲ್ಲಿ ಕಾಡ್ಗಿಚ್ಚು ( ಸಂಗ್ರಹ ಚಿತ್ರ )

ಡೆಹ್ರಾಡೂನ್ : ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು ಕೇವಲ 24 ಗಂಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದ್ದು, ನಿಯಂತ್ರಿಸದೇ ಹೋದಲ್ಲಿ ಇಡೀ ಉತ್ತರ ಭಾರತಕ್ಕೆ ವ್ಯಾಪಿಸುವ ಸಾಧ್ಯತೆಯಿದೆ ಎಂದು ಇಸ್ರೋ ಎಚ್ಚರಿಕೆ ನೀಡಿದೆ.

ಇಸ್ರೋ ಬಿಡುಗಡೆ ಮಾಡಿರುವ ಸ್ಯಾಟಲೈಟ್ ಚಿತ್ರಗಳು ನೀಡಿರುವ ಮಾಹಿತಿಯಂತೆ ಸಮಯ ಕಳೆಯುತ್ತಿದ್ದಂತೆಯೇ ಕಾಡ್ಗಿಚ್ಚು ವ್ಯಾಪಕವಾಗಿ ಹರಡುತ್ತಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಕಾಡ್ಗಿಚ್ಚು ತನ್ನ ಕೆನ್ನಾಲಿಗೆಯನ್ನು ನಾಲ್ಕು ಪಟ್ಟು ಹೆಚ್ಚಳ ಮಾಡಿದೆ ಎಂದು ತಿಳಿದುಬಂದಿದೆ. ಹೈದರಾಬಾದಿನಲ್ಲಿರುವ ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ ಸಾವಿರ ಎಕರೆಗೂ ಹೆಚ್ಚು ಪ್ರದೇಶಗಳಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ಕೂಡಲೇ ಇದನ್ನು ನಿಯಂತ್ರಿಸದೇ ಹೋದರೆ ಕಾಡ್ಗಿಚ್ಚು ಇಡೀ ಉತ್ತರ ಭಾರತಕ್ಕೆ ಹಬ್ಬುವ ಅಪಾಯವಿದೆ ಎಂದು ಹೇಳಿದೆ.

ಕಾಡ್ಗಿಚ್ಚು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ತೆಗೆದುಕೊಂಡಿರುವ ಕ್ರಮಗಳು ಉತ್ತಮವಾದದ್ದೇ ಆದರೂ ಕಾಡ್ಗಿಚ್ಚು ನಿಯಂತ್ರಿಸುವ ನಿಟ್ಟಿನಲ್ಲಿ ಇದೂ ಸಾಲದು ಎಂದು ಸಂಸ್ಥೆ ಅಭಿಪ್ರಾಯಪಟ್ಟಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ಕಾಡ್ಗಿಚ್ಚಿನ ಬೆಂಕಿಯ ಅಲೆಗಳು ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದ ಕಾಡುಗಳಿಗೂ ವ್ಯಾಪಿಸಬಹುದು ಎದು ಎಚ್ಚರಿಕೆ ನೀಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 3 ತಂಡ ರವಾನಿ ಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆಯ 1 ತಂಡ ನೈನಿತಾಲ್‌ನಲ್ಲಿ ಬೀಡುಬಿಟ್ಟಿದ್ದು, ಎಂಐ-17 ಹೆಲಿಕಾಪ್ಟರ್‌ ಮೂಲಕ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited