ನವದೆಹಲಿ : ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಒಬ್ಬ ಅತ್ಯಂತ ಪ್ರಭಾವೀ ವ್ಯಕ್ತಿ ಶಾಮೀಲಾಗಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪಾರೀಕರ್ ಸಂಸತ್ತಿನಲ್ಲಿ ಹೇಳುವ ಮೂಲಕ ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರನ್ನು ಹೇಳದೇ ನಿಗೂಢತೆಯನ್ನು ಕಾಯ್ದಿರಿಸಿಕೊಂಡಿದ್ದಾರೆ.
ಅಗಸ್ಟಾ ಹಗರಣದಲ್ಲಿ ಯಾರು ಶಾಮೀಲಾಗಿದ್ದಾರೆ ಎಂದು ನಾನು ಹೇಳುವುದಿಲ್ಲ. ಆದರೆ ಅತ್ಯಂತ ಪ್ರಭಾವೀ ವ್ಯಕ್ತಿ ಈ ಹಗರಣದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದಷ್ಟೇ ನಾನೀಗ ಹೇಳುವೆ ಎಂದು ಪಾರೀಕರ್ ಸದನದಲ್ಲಿ ಹೇಳಿದರು.
3,600 ಕೋಟಿ ರೂ. ವೆಚ್ಚದಲ್ಲಿ 12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣವನ್ನು ಎಲ್ಲ ದೃಷ್ಟಿಕೋನದಿಂದ ಕೂಲಂಕಷವಾಗಿ ತನಿಖೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ ದಾಖಲೆಪತ್ರಗಳನ್ನು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದರು.