ಮೈಸೂರು : ಈ ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ವೇಳೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ನಮ್ಮ ಸರ್ಕಾರದ ವಿರುದ್ಧ ಯಾವುದೇ ಗುರುತರ ಆರೋಪವಿಲ್ಲ. ಕೇವಲ ರಾಜಕೀಯ ಉದ್ದೇಶಕ್ಕಾಗಿ ಆರೋಪ ಮಾಡಲಾಗುತ್ತಿದೆ ಎಂದ ಅವರು, 160 ಭರವಸೆಗಳಲ್ಲಿ 120 ಭರವಸೆಗಳು ಈಡೇರಿವೆ ಎಂದು ಹೇಳಿದ್ದಾರೆ.
ಇನ್ನು ಹೈಕಮಾಂಡ್ ಸೂಚನೆಯ ಮೇರಗೆ ನಿಗಮ ಮಂಡಳಿ ಅಧ್ಯಕ್ಷರ ಅವಧಿಯನ್ನು 3 ತಿಂಗಳು ವಿಸ್ತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.