ನವದೆಹಲಿ : ಪಂಚರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿ ವಿಧಾನಸಭಾ ಚುನಾವಣೆ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮಧ್ಯಾಹ್ನ 12ರ ವೇಳೆಗೆ ಸ್ಪಷ್ಟ ಚಿತ್ರಣ ದೊರಕಲಿದೆ.
ರಾಜಕೀಯ ಪಕ್ಷಗಳ ಅಸ್ತಿತ್ವ ಹಾಗೂ ಹಣೆಬರಹ ನಿರ್ಧರಿಸಲಿರುವ ಈ ಫಲಿತಾಂಶ ಪ್ರಾದೇಶಿಕ ಪಕ್ಷ ಹಾಗೂ ರಾಷ್ಟ್ರೀಯ ಪಕ್ಷಗಳ ನಡುವಿನ ತಾಕತ್ತು ಪ್ರದರ್ಶನಕ್ಕೂ ವೇದಿಕೆ ಆಗಲಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳ ಪೈಕಿ 70 ಸ್ಥಾನಗಳಲ್ಲಿ ಮಮತಾ ಬ್ಯಾನರ್ಜಿ ನೇತ್ರತ್ವದ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಸಿಪಿಎಂ ಮೈತ್ರಿಕೂಟ 38 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ. ಬಿಜೆಪಿ 2 ಮತ್ತು ಇತರರು 1 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.
ಅಸ್ಸಾಂನಲ್ಲಿ 126 ಸ್ಥಾನಗಳ ಪೈಕಿ ಬಿಜೆಪಿ ಮೈತ್ರಿಕೂಟ 22 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದರೆ, ಕಾಂಗ್ರೆಸ್ 18 ಸ್ಥಾನಗಳಲ್ಲಿ ಮನ್ನಡೆ ಪಡೆದಿದೆ. ಎಐಯುಡಿಎಪ್ 3 ಸ್ಥಾನ ಮತ್ತು ಇತರರು 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.
ತಮಿಳುನಾಡಿನಲ್ಲಿ 234 ಸ್ಥಾನಗಳ ಪೈಕಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ 65 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದರೆ. ಆಡಳಿತಾರೂಢ ಎಐಎಡಿಎಂಕೆ 75 ಸ್ಥಾನಗಳಲ್ಲಿ ಮುನ್ನಡೆಸಾಧಿಸಿದ್ದು , ತೀವ್ರ ಜಿದ್ದಾಜಿದ್ದುಕಾಣಿಸಿದ್ದು ಫಲಿತಾಂಶ ಕುತೂಹಲ ಮೂಡಿಸಿದೆ. ವಿಜಯಕಾಂತ್ ನೇತೃತ್ವದ ಡಿಎಂಡಿಕೆ 1 ಸ್ಥಾನಗಳಲ್ಲಿ ,ಇತರರು 1 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.
ಕೇರಳದಲ್ಲಿ 140 ಸ್ಥಾನಗಳ ಪೈಕಿ ಎಡರಂಗ(ಎಲ್ಡಿಎಫ್ ) 71 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.ಕಾಂಗ್ರೆಸ್ ಮೈತ್ರಿಕೂಟ (ಯುಡಿಎಫ್) 54 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಎನ್ಡಿಎ 2 ಸ್ಥಾನಗಳಲ್ಲಿ ಇತರ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಪುದುಚೇರಿಯಲ್ಲಿ 30 ಸ್ಥಾನಗಳ ಪೈಕಿ ಎಐಎನ್ಆರ್ಸಿ 1 ಸ್ಥಾನಗಳಲ್ಲಿ ,ಎಐಎಡಿಎಂಕೆ 4 ಸ್ಥಾನಗಳಲ್ಲಿ, ಕಾಂಗ್ರೆಸ್ 7 ಮತ್ತುಇತರರು 0 ಮುನ್ನಡೆ ಸಾಧಿಸಿದ್ದಾರೆ.