ನವದೆಹಲಿ : ಉತ್ತರಪ್ರ ದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ನರೇಂದ್ರ ಮೋದಿ ಸರ್ಕಾರ 2 ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನೇ ಮುಂದಿಟ್ಟುಕೊಂಡು ಪ್ರಚಾರಾಂದೋಲನ ನಡೆಸಲು ನಿರ್ಧರಿಸಿದೆ.
ಕೇಂದ್ರ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಇದು ವಿಧಾನಸಭಾ ಚುನಾವಣೆಯ ಪ್ರಚಾರದ ಒಂದು ಭಾಗ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕೇಂದ್ರ ಸರ್ಕಾರದ ಎರಡನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ 30 ತಂಡಗಳನ್ನು ರಚಿಸಲಾಗಿದ್ದು, ಇದು ಪ್ರತಿ ರಾಜ್ಯದ ಐದಾರು ಸ್ಥಳಗಳಿಗೆ ಭೇಟಿ ನೀಡಿ, ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಲಿದೆ. ಸಂಪುಟ ಸಚಿವರು, ಸಹಾಯಕ ಸಚಿವರು, ಹಿರಿಯ ನಾಯಕರನ್ನು ತಂಡ ಒಳಗೊಂಡಿರಲಿದೆ. ಕೇಂದ್ರದ ಎಲ್ಲ ಸಚಿವರು ಕಡ್ಡಾಯವಾಗಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ಸರ್ಕಾರದ ಪರ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಕಟ್ಟುನಿಟ್ಟಿನ ಆದೇಶ ನೀಡಿದೆ ಎನ್ನಲಾಗಿದೆ.