ಚೆನ್ನೈ : ಜನತೆಯೊಂದಿಗೆ ಬೆರೆತು ಅವರ ಶ್ರೇಯೋಭಿವೃದ್ಧಿ ಸಾಧಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಎಐಎಡಿಎಂಕೆ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಜಯಲಲಿತಾ ತಿಳಿಸಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ವಿಜಯವಾಗಿದೆ. ಈ ಗೆಲುವು ನೀಡಿದ ಜನತೆಗೆ ಧನ್ಯವಾದ ಅರ್ಪಿಸಿದರು.
1948ರಿಂದ ಅಧಿಕಾರದಲ್ಲಿರುವ ಯಾವುದೇ ಪಕ್ಷ ಇಲ್ಲಿಯವರೆಗೆ ಎರಡನೇ ಬಾರಿ ಗೆದ್ದು ಬಂದಿಲ್ಲ. ಜನತೆಯ ಈ ತೀರ್ಪಿಗೆ ನನ್ನ ಕೊನೆಯ ಉಸಿರಿರುವವರೆಗೂ ಜನ ಪರ ಸೇವೆ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನಮ್ಮ ಮೇಲೆ ಎಂಜಿಆರ್ ಆಶೀರ್ವಾದವಿದೆ. ಜನರ ಅಭಿವೃದ್ಧಿ ಬಿಟ್ಟರೆ ನನಗೆ ಬೇರೆ ತಿಳಿದಿಲ್ಲ. ಇಷ್ಟು ದಿನ ರಾಜ್ಯದ ಅಭಿವೃದ್ಧಿಗಾಗಿ ದುಡಿದಿದ್ದೇನೆ. ಇನ್ನು ಮುಂದೆಯೂ ರಾಜ್ಯದ ಅಭಿವೃದ್ಧಿಗಾಗಿ ದುಡಿಯುತ್ತೇನೆ. ನನ್ನ ಕೊನೆಯುಸಿರಿರುವವರೆಗೂ ಜನರಿಗಾಗಿ ದುಡಿಯುತ್ತೇನೆ ಎಂದಿದ್ದಾರೆ.