ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳ ಸಂಭ್ರಮ. ಎರಡು ವಸಂತಗಳನ್ನು ಪೂರೈಸಿರುವ ಈ ಸರ್ಕಾರ ಸಾಕಷ್ಟು ಸಾಧನೆ ಮಾಡಿದೆ.
ದೆಹಲಿ, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎದುರಾದ ಸೋಲನ್ನೇ ಸವಾಲಾಗಿ ಸ್ವೀಕರಿಸಿದ ಬಿಜೆಪಿ ನಾಯಕರು, ಪಂಚರಾಜ್ಯ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಮಾಡಿದ ಸಾಧನೆ ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ಚುನಾವಣೆ ಎದುರಿಸುವುದಕ್ಕೆ ಮತ್ತಷ್ಟು ಉತ್ಸಾಹ ತುಂಬಿದೆ.
ಎನ್.ಡಿ.ಎ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಸಹರಾನ್ಪುರದಲ್ಲಿ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರದ ದಿನಗಳಲ್ಲಿ ಒಡಿಶಾ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ರ್ಯಾಲಿ ನಡೆಸಲಿದ್ದಾರೆ.
ಎನ್ಡಿಎ ಸರ್ಕಾರ 2 ವರ್ಷ ಪೂರೈಸಿ ರುವ ಹಿನ್ನೆಲೆಯಲ್ಲಿ ಮೇ 28ರಂದು ನಡೆಯಲಿರುವ ಸಾಧನಾ ಸಮಾವೇಶದ ನಿರೂಪಣೆಯನ್ನು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಿರ್ವಹಿಸಲಿದ್ದಾರೆ ಎಂಬ ವರದಿ ಹಿನ್ನಲೆಯಲ್ಲಿ, ಕಾಂಗ್ರೆಸ್ನಿಂದ ಟೀಕೆ ವ್ಯಕ್ತವಾಗಿದ್ದು, ಮೋದಿ ಸರ್ಕಾರ ಕಪ್ಪುಹಣ ಹಿಂತರುವುದಾಗಿ ಭರವಸೆ ನೀಡುತ್ತಿದೆ. ಆದರೆ ಪನಾಮಾ ಪೇಪರ್ ವಿವಾದದಲ್ಲಿ ಸಿಲುಕಿರುವ ಅಮಿತಾಭ್ಗೆ ಸಾಧನಾ ಸಮಾವೇಶದ ನಿರೂಪಣೆ ಜವಾಬ್ದಾರಿ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿತು. ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಗ್ ಬಿ, ಎನ್ ಡಿ ಎ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ನಾನು ನಿರೂಪಣೆ ಮಾಡುತ್ತಿಲ್ಲ. ನಟ ಆರ್ ಮಾಧವನ್ ನಿರೂಪಣೆ ಮಾಡುತ್ತಿದ್ದಾರೆ. ನಾನು ಕೇಂದ್ರ ಸರ್ಕಾರದ 'ಬೇಟಿ ಬಚಾವೋ ಬೇಟಿ ಪಡಾವೋ' ಯೋಜನೆಯ ರಾಯಭಾರಿಯಾಗಿದ್ದು, ಕಾರ್ಯಕ್ರಮದಲ್ಲಿ ಅದರ ಒಂದು ತುಣಕನ್ನು ನಿರೂಪಣೆ ಮಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೋದಿ ಸರ್ಕಾರ ಬಂದ ನಂತರ ಈವರೆಗೆ ಸುಮಾರು 40 ಹೊಸ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳಲ್ಲಿ ಪ್ರಮುಖವಾದ ಮತ್ತು ಕಳೆದೊಂದು ವರ್ಷದಲ್ಲಿ ಜಾರಿಯಾದ ಯೋಜನೆಗಳ ಈ ಕೆಳಗಿನಂತಿವೆ.
ಫಸಲ್ ವಿಮಾ
ಉಜ್ವಲ ಯೋಜನೆ
ಸ್ಟಾರ್ಟಪ್ ಇಂಡಿಯಾ
ಸಿಲ್ಕ್ ಇಂಡಿಯಾ
ಸ್ಟಾಂಡಪ್ ಇಂಡಿಯಾ
ಡಿಜಿಟಲ್ ಇಂಡಿಯಾ
ಸ್ಮಾರ್ಟ್ ಸಿಟಿ ಯೋಜನೆ
ಪ್ರಧಾನಮಂತ್ರಿ ಜನಧನ
ಪಹಲ್, ಸುಕನ್ಯಾ ಸಮೃದ್ಧಿ