Untitled Document
Sign Up | Login    
Dynamic website and Portals
  
May 28, 2016

ದಾವಣಗೆರೆಯಲ್ಲಿ ಪ್ರಧಾನಿ ಮೋದಿ ವಿಕಾಸಪರ್ವ ಸಮಾವೇಶ: ಸಿದ್ಧತಾ ಪರಿಶೀಲನೆ

ದಾವಣಗೆರೆ : ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ವಿಕಾಸಪರ್ವ ಕಾರ್ಯಕ್ರಮಕ್ಕೆ ನಗರ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ.

ಮೇ 29ರಂದು ದಾವಣಗೆರೆಯ ಹೈಸ್ಕೂಲ್‌ ಮೈದಾನದಲ್ಲಿ ವಿಕಾಸಪರ್ವ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಲಿದ್ದಾರೆ. ಈ ವೇಳೆ ಬಿಪಿಎಲ್‌ ಕಾರ್ಡ್‌ದಾರರಿಗೆ ಉಚಿತ ಎಲ್‌ಪಿಜಿ ಸೌಲಭ್ಯ ಕಲ್ಪಿಸುವ ಉಜ್ವಲ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸಮಾವೇಶಕ್ಕೆ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ವಿಶೇಷ ಭದ್ರತಾ ಪಡೆ ತಂಡ ಈಗಾಗಲೇ ನಗರಕ್ಕೆ ಆಗಮಿಸಿದ್ದು, ಕಾರ್ಯಕ್ರಮ ನಡೆಯಲಿರುವ ಹೈಸ್ಕೂಲ್‌ ಮೈದಾನ ಸೇರಿದಂತೆ ಸುತ್ತಮುತ್ತಲ ಪ್ರದೇಶವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಸಮಾವೇಶ ಕುರಿತು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್ ಸಿದ್ಧತಾ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸುವ ಮೋದಿ, ಬಳಿಕ ಹೆಲಿಕಾಪ್ಟರ್‌ ಮೂಲಕ ದಾವಣಗೆರೆಗೆ ಆಗಮಿಸಲಿದ್ದಾರೆ. 4.30ಕ್ಕೆ ಸಮಾರಂಭ ನಡೆಯಲಿದ್ದು, ಉಜ್ವಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದ 2 ವರ್ಷಗಳ ಸಾಧನೆ ಬಗ್ಗೆ ಅಂಕಿ-ಅಂಶಗಳ ಸಮೇತ ಜನಸಾಮಾನ್ಯರಿಗೆ ಮಾಹಿತಿ ಒದಗಿಸಲಿದ್ದಾರೆ. ಸಂಜೆ 5.30ಕ್ಕೆ ಹುಬ್ಬಳ್ಳಿ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ ಎಂದು ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited