ಡೆಹ್ರಾಡೂನ್ : ಕೇದಾರದಲ್ಲಿ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕೇದಾರನಾಥ ಅಕ್ಷರಶಃ ನಲುಗಿ ಹೋಗಿದೆ. ಮಳೆಯ ಅಬ್ಬರಕ್ಕೆ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ.
ಈಗಾಗಲೇ ಕೇದಾರನಾಥ ಹಾಗೂ ಯಮುನೋತ್ರಿಗೆ ತೆರಳುವ ಮಾರ್ಗ ಬಂದ್ ಆಗಿದೆ. ರಾಜಧಾನಿ ಡೆಹ್ರಾಡೂನ್ನಲ್ಲಿ ಸಹ ಗುಡುಗು ಸಹಿತ ಮಳೆ ಮುಂದುವರೆದಿದೆ. ಮರಗಳು ವಿದ್ಯುತ್ ತಂತಿಗಳ ಮೇಲೆ ಮುರಿದು ಬಿದ್ದ ಪರಿಣಾಮ ನಗರದಲ್ಲಿ ಕಗ್ಗತ್ತಲು ಆವರಿಸಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮರಗಳು ಉರುಳಿದ ಪರಿಣಾಮ ಯಾತ್ರಿಕರು ಪರದಾಡಬೇಕಾದ ಸ್ಥಿತಿ ಇದೀಗ ನಿರ್ಮಾಣವಾಗಿದೆ. ಸಿಯಾಲ್ಕೋಟ್ ಹಾಗೂ ಕುಥಿಯಾನ ನಗರಗಳು ತುರ್ತು ಪರಿಸ್ಥಿತಿ ಎದುರಿಸುತ್ತಿವೆ. ಮುಖ್ಯ ಅಭಿವೃದ್ಧಿ ಅಧಿಕಾರಿ (ಸಿಡಿಓ) ಮಹ್ಮದ್ ಇಕ್ಬಾಲ್ ಪ್ರಕಾರ ಸಿಯಾಲ್ಕೋಟ್ನಲ್ಲಿ 10 ಮನೆಗಳು ಮಳೆಯಿಂದ ಹಾನಿಗೊಳಗಾದರೆ, ಕುಥಿಯಾನಾದಲ್ಲಿ 20 ಮನೆಗಳು ಹುತಿಯಾಗಿವೆ ಎಂದು ತಿಳಿಸಿದ್ದಾರೆ.