ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸುತ್ತಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆಯ ಕಟ್ಟೆಚ್ಚರ ನೀಡಿವೆ.
ಹರ್ಯಾಣಾದ ಬಸ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇದು ಕೇವಲ ಪರೀಕ್ಷಾರ್ಥ ನಡೆಸಿದ ಸ್ಪೋಟವಾಗಿದ್ದು, ದೇಶದ ಆಂತರಿಕ ಭದ್ರತೆಯನ್ನು ಛಿದ್ರಗೊಳಿಸಲು ಕೆಲ ಗುಂಪು ಹುನ್ನಾರ ನಡೆಸುತ್ತಿವೆ ಎಂದು ತಿಳಿದುಬಂದಿದೆ.
ಉಗ್ರರ ಗುರಿ ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸ್ಫೋಟಗಳನ್ನು ನಡೆಸುವ ಯೋಜನೆಯಾಗಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಪಾಣಿಪಟ್ನಲ್ಲಿ ಕೆಲ ತಿಂಗಳ ಹಿಂದೆ ಎರಡು ಸ್ಫೋಟ ರೈಲಿನಲ್ಲಿ ಸಂಭವಿಸಿತ್ತು. ಹರ್ಯಾಣದಲ್ಲಿ ಕಳೆದ ಗುರುವಾರ ಬಾಂಬ್ ಸ್ಪೋಟ ನಡೆಸಲಾಗಿದೆ. ಸ್ಥಳೀಯವಾಗಿ ದೊರಕುವ ಸಿಡಿಮದ್ದುಗಳನ್ನು ಬಳಸಿಕೊಂಡು ಬಾಂಬ್ ತಯಾರಿಸಲಾಗಿದೆ. ಈ ಮೂರೂ ಸ್ಪೋಟಗಳೂ ಉಗ್ರರು ನಡೆಸಿದ ಪರೀಕ್ಷಾರ್ಥ ಪ್ರಯೋಗ ಎಂದು ಗುಪ್ತಚರ ಇಲಾಖೆ ತಿಳಿಸಿದೆ.