ಬೆಂಗಳೂರು : ಮಹಿಳಾ ಉದ್ದಿಮೆದಾರರಿಗಾಗಿ ಹುಬ್ಬಳ್ಳಿ-ಧಾರವಾಡ ಹಾಗೂ ಕನಕಪುರ ತಾಲ್ಲೂಕಿನ ಹಾರೋವಳ್ಳಿಯಲ್ಲಿ `ಮಹಿಳಾ ಪಾರ್ಕ್’ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಮರ್ಜ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ಕೈಗಾರಿಕೋದ್ಯಮಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಹಾರೋವಳ್ಳಿಯಲ್ಲಿ 100 ಎಕರೆ ಜಮೀನನ್ನೂ ಮಹಿಳಾ ಪಾರ್ಕ್ಗಾಗಿ ಮೀಸಲಿಡಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಆರಂಭಿಸಲಿರುವ ಕೈಗಾರಿಕಾ ಪಾರ್ಕ್ಗಳು ಹಾಗೂ ಕೈಗಾರಿಕಾ ವಸಾಹತುಗಳಲ್ಲಿ ಮಹಿಳಾ ಉದ್ಯಮಿಗಳಿಗಾಗಿ ಶೇ. 5 ರಷ್ಟು ಮೀಸಲು ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಮಹಿಳಾ ಉದ್ದಿಮೆದಾರರ ಸಬಲೀಕರಣ ಮತ್ತು ಅವರ ಅಭಿವೃದ್ಧಿಗಾಗಿ ಎಲ್ಲ ಸಹಾಯವನ್ನು ನೀಡಲಾಗುವುದು. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮಹಿಳಾ ಉದ್ದಿಮೆದಾರರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆ ಮೂಲಕ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು ಎಂದು ಕರೆ ನೀಡಿದರು.