ದೆಹಲಿ : ಬಿಜೆಪಿ ಶಾಸಕರೊಬ್ಬರು ವಿಧಾನಸಭೆಯೊಳಗೆ ಬೆಂಚ್ ಹತ್ತಿ ಪ್ರತಿಭಟನೆ ನಡೆಸಿದ ಘಟನೆ ದೆಹಲಿ ಅಸೆಂಬ್ಲಿಯಲ್ಲಿ ನಡೆದಿದೆ.
ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ವಿಜೇಂದ್ರ ಗುಪ್ತಾ ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು.
ಆದರೆ ಸ್ಪೀಕರ್ ರಾಮ್ ನಿವಾಸ್ ಅವರು ಗುಪ್ತಾಗೆ ಮಾತನಾಡಲು ಅವಕಾಶ ನೀಡದಿದ್ದಕ್ಕೆ ಕೋಪಗೊಂಡ ಶಾಸಕ ಏಕಾಏಕಿ ಬೆಂಚ್ ಮೇಲೆ ಹತ್ತಿ ಮಾತನಾಡಲು ಆರಂಭಿಸಿದ್ದರು.
ಇದು ತುಂಬಾ ಅಪಮಾನಕಾರಿ ವರ್ತನೆ.ಸದಸ್ಯರೊಬ್ಬರು ಬೆಂಚ್ ಮೇಲೆ ಹತ್ತಿ ಪ್ರತಿಭಟನೆ ನಡೆಸುತ್ತಾರೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಅಸಮಾಧಾನವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದು ನಿಜಕ್ಕೂ ಆಘಾತಕಾರಿ ಘಟನೆ ಎಂದು ತಿಳಿಸಿದ್ದಾರೆ.