Untitled Document
Sign Up | Login    
Dynamic website and Portals
  
June 14, 2016

ರಾಜ್ಯದಲ್ಲಿ ಆಹಾರ ಆಯೋಗ ರಚನೆ

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ ಮುಖ್ಯಮಂತ್ರಿ ಅವರು ಸೇರಿದಂತೆ ಉಭಯ ಸದನಗಳ ಸಭಾಧ್ಯಕ್ಷರು, ಸಭಾಪತಿಗಳು, ವಿರೋಧ ಪಕ್ಷಗಳ ನಾಯಕರು ಸೇರಿದಂತೆ ಆಹಾರ ಸಚಿವರು ಸಮಿತಿಯಲ್ಲಿರುತ್ತಾರೆ ಎಂದರು.

ಆಹಾರ ಆಯೋಗ ರಚನೆಯಾಗುವವರೆಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯೇ ಆಯೋಗ ನಿರ್ವಹಿಸುವ ಕೆಲಸವನ್ನು ತಾತ್ಕಾಲಿಕವಾಗಿ ನಿರ್ವಹಿಸಲಿದೆ. ದೇಶದಲ್ಲೇ ಈ ಆಯೋಗ ರಚಿಸುತ್ತಿರುವ ಮೂರನೇ ರಾಜ್ಯ ಕರ್ನಾಟಕವಾಗಲಿದೆ. ಈಗಾಗಲೇ ಬಿಹಾರ ಮತ್ತು ಹರಿಯಾಣ ರಾಜ್ಯಗಳಲ್ಲಿ ಆಯೋಗ ರಚನೆಯಾಗಿ ಕರ್ತವ್ಯ ನಿರ್ವಹಿಸುತ್ತಿವೆ ಎಂದರು.

ರಾಜ್ಯದಲ್ಲಿ ಪಡಿತರ ಆಹಾರ ಧಾನ್ಯಗಳ ಅಕ್ರಮ ಸಾಗಾಣಿಕೆ ಹಾಗೂ ದುರ್ಬಳಕೆಯಾಗುತ್ತಿರುವುದನ್ನು ಪತ್ತೆಮಾಡಿ ಮಾಹಿತಿ ನೀಡುವ ಮಾಹಿತಿದಾರರಿಗೆ ಬಹುಮಾನ ನೀಡುವ ಯೋಜನೆಯನ್ನು ತಕ್ಷಣದಿಂದ ಜಾರಿಗೆ ತರಲಾಗುವುದು ಎಂದ ಆಹಾರ ಸಚಿವರು ಪಡಿತರ ಅಕ್ರಮ ಸಾಗಾಣಿಕೆ ಬಗ್ಗೆ ಮಾಹಿತಿ ನೀಡುವವರಿಗೆ ಸಾಗಾಣಿಕೆ ಮಾಡುತ್ತಿರುವ ಪಡಿತರ ಮೌಲ್ಯದ ಶೇ 5 ರಷ್ಟು ಹಣವನ್ನು ಬಹುಮಾನವಾಗಿ ನೀಡಲಾಗುವುದು. ಅಲ್ಲದೆ ಮಾಹಿತಿ ನೀಡುವ ಮಾಹಿತಿದಾರರ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಇದು ದೇಶದಲ್ಲೇ ಮೊದಲ ಕಾರ್ಯಕ್ರಮವಾಗಿದೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited