ನವದೆಹಲಿ : ಕಾಂಗ್ರೆಸ್ ವಿರುದ್ಧ ಇನ್ನೊಂದು ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ 27 ಉನ್ನತ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಸೋನಿಯಾ ಗಾಂಧಿಗೆ ನಿಷ್ಠರಾಗಿರುವ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಬಯಲುಮಾಡುವುದು ತಮ್ಮ ಮುಂದಿನ ಯೋಜನೆ ಎಂದು ಘೋಷಿಸಿದ್ದಾರೆ.
ಸೋನಿಯಾ ಅವರಿಗೆ ನಿಷ್ಠರಾಗಿರುವ ಅಧಿಕಾರಿಗಳನ್ನು ಯುಪಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಪಿ ಚಿದಂಬರಂ ಅವರು ಆಯ್ಕೆ ಮಾಡಿದ್ದರು ಎಂದು ಸ್ವಾಮಿ ಆರೋಪಿಸಿದ್ದಾರೆ.
ಇದೇ ವೇಳೆ ರಘುರಾಮ್ ರಾಜನ್ ಅವರು ಆರ್ ಬಿಐ ಗವರ್ನರ್ ಆಗಿ ಎರಡನೇ ಅವಧಿಗೆ ಮುಂದುವರೆಯುವುದನ್ನು ನಿರಾಕರಿಸಿರುವ ನಿರ್ಧಾರವಕ್ಕೆ ಪ್ರತಿಕ್ರಿಯಿಸಿರುವ ಸ್ವಾಮಿ, ಆತ್ಮಾಭಿಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಘುರಾಮ್ ರಾಜನ್ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದು ಹೇಳಿದ್ದಾರೆ.