Untitled Document
Sign Up | Login    
Dynamic website and Portals
  
June 30, 2016

2018 ರ ಮಹಾಮಸ್ತಕಾಭಿಷೇಕವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ: ಸಿಎಂ ಸಿದ್ದರಾಮಯ್ಯ

ಹಾಸನ : ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶ್ರವಣಬೆಳಗೊಳದ ವಿಂದ್ಯಗಿರಿ ಬೆಟ್ಟದ ಮೇಲಿರುವ ಅಹಿಂಸೆಯ ಪ್ರತಿಪಾದಕ ಗೊಮ್ಮಟೇಶ್ವರ ಭಗವಾನ್ ಬಾಹುಬಲಿಯ 58.8 ಅಡಿ ಮೂರ್ತಿಗೆ 2018 ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭ ಆಚರಣೆಯ ಉನ್ನತಾಧಿಕಾರ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಗಿಂತಲೂ ಈ ಬಾರಿ ಎಲ್ಲಾ ರೀತಿಯಲ್ಲೂ ಬಹಳಷ್ಟು ಬದಲಾವಣೆ ಹಾಗೂ ಬೆಳವಣಿಗೆಗಳಾಗಿವೆ. ಭಕ್ತ ಸಮೂಹಕ್ಕೆ ಹಾಗೂ ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ವಸತಿ ಹಾಗೂ ಶೌಚಾಲಯ ವ್ಯವಸ್ಥೆ, ನಿರಂತರ ವಾಹನ ಸೌಲಭ್ಯ, ಅತ್ಯುತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ ಹಾಗೂ ಸೂಕ್ತ ಭದ್ರತಾ ಸೌಲಭ್ಯಗಳನ್ನು ಒದಗಿಸಿ ಅಂತಾರಾಷ್ಟ್ರೀಯ ಮಟ್ಟದ ಈ ಕಾರ್ಯಕ್ರಮವನ್ನು ಸ್ಮರಣಾರ್ಹ ಕಾರ್ಯಕ್ರಮವನ್ನಾಗಿ ರೂಪಿಸಬೇಕೆಂಬುದು ಸರ್ಕಾರದ ಆಶಯ ಎಂದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಎ. ಮಂಜು ಮಾತನಾಡಿ, ಈ ಹಿಂದೆ 2006 ರಲ್ಲಿ ಆಚರಿಸಿದ ಮಹಾಮಸ್ತಕಾಭಿಷೇಕಕ್ಕೆ 116.66 ಕೋಟಿ ರೂ ವೆಚ್ಚಮಾಡಲಾಗಿತ್ತು. ಇದೀಗ 2018 ರ ಮಹಾಮಸ್ತಕಾಭಿಷೇಕಕ್ಕೆ 575 ಕೋಟಿ ರೂ ಮೊತ್ತದ ಅಂದಾಜು ಪಟ್ಟಿ ತಯಾರಿಸಲಾಗಿದೆ. ಹತ್ತು-ದಿನಗಳ ಈ ಸಮಾರಂಭದಲ್ಲಿ 40 ಲಕ್ಷದಿಂದ 50 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ದೇಶ-ವಿದೇಶಗಳಿಂದಲೂ ಆಗಮಿಸುವ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು, ರಸ್ತೆಗಳ ಸುಧಾರಣೆ ಕಾಮಗಾರಿಗಳೂ ಎಲ್ಲವೂ ಈ ಅಂದಾಜು ಪಟ್ಟಿಯಲ್ಲಿ ಸೇರಿವೆ. ಕಳೆದ ಮಹಾಮಸ್ತಕಾಭಿಷೇಕದ ಸಂಧರ್ಭದಲ್ಲಿ 400 ಎಕರೆ ಪ್ರದೇಶದಲ್ಲಿ 12,000 ಮಂದಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿಯ ಮಹಾಮಸ್ತಕಾಭಿಷೇಕಕ್ಕೆ 710 ಎಕರೆ ಪ್ರದೇಶದಲ್ಲಿ ಕನಿಷ್ಠ 25,000 ಜನರಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ. ಎನ್. ಬಾಲಕೃಷ್ಣ ಅವರು ಶ್ರವಣಬೆಳಗೊಳ ರೈಲ್ವೇ ನಿಲ್ದಾಣದ ಬಳಿ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಿಸುವತ್ತ ಹಾಗೂ ಸಣ್ಣ ನೀರಾವರಿ ಇಲಾಖೆಯ ಮೂಲಕ ಹೊಸಳ್ಳಿ ಹಾಗೂ ಉತ್ತೇನಳ್ಳಿ ಕೆರೆಗಳ ಪುನುರುಜ್ಜೀವನ ಮಾಡಿ ಸುಂದರೀಕರಣಗೊಳಿಸುವತ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited