Untitled Document
Sign Up | Login    
Dynamic website and Portals
  
July 7, 2016

ನಮಾಮಿ ಗಂಗೆ ಯೋಜನೆಗೆ ಇಂದು ಚಾಲನೆ

ನಮಾಮಿ ಗಂಗೆ ಯೋಜನೆಗೆ ಇಂದು ಚಾಲನೆ

ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ನಮಾಮಿ ಗಂಗೆ' ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ನಮಾಮಿ ಗಂಗೆ ಕಾರ್ಯಕ್ರಮದ ಅನ್ವಯ 231 ಯೋಜನೆಗಳಿಗೆ ಈ ದಿನ ಚಾಲನೆ ಸಿಗಲಿದೆ.

ಚರಂಡಿ ನೀರು ಸ್ವಚ್ಛತಾ ಘಟಕಗಳನ್ನು ಸ್ಥಾಪಿಸುವುದು ಪ್ರಮುಖವಾಗಿದೆ. ಗಂಗಾ ನದಿ ತಟದ 104 ಸ್ಥಳಗಳಲ್ಲಿ ಏಕಕಾಲಕ್ಕೆ ಯೋಜನೆ ಆರಂಭವಾಗಲಿದೆ. ಈ ಆಂದೋಲನಕ್ಕೆ 5 ವರ್ಷಗಳ ಅವಧಿಗೆ 20 ಸಾವಿರ ಕೋಟಿ ರೂ.ಗಳನ್ನು ಸರ್ಕಾರ ಮೀಸಲಿರಿಸಿದೆ. 2019ರೊಳಗೆ ಗಂಗೆಯನ್ನು ವಿಶ್ವದ ಟಾಪ್‌-10 ಸ್ವಚ್ಛ ನದಿ ಎಂದು ಘೋಷಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ. ಇದಕ್ಕೆಂದೇ ಪ್ರತ್ಯೇಕ ಸಚಿವ ಖಾತೆಯನ್ನು ಸೃಷ್ಟಿಸಿ ಅದನ್ನು ಹಿರಿಯ ಸಚಿವೆ ಉಮಾಭಾರತಿ ಅವರ ಹೆಗಲಿಗೆ ವಹಿಸಿದ್ದಾರೆ.

ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಉಮಾ ಭಾರತಿ, ನರೇಂದ್ರ ತೋಮರ್‌ ಮತ್ತು ಮಹೇಶ ಶರ್ಮಾ ಹರಿದ್ವಾರದಲ್ಲಿ ಅಭಿಯಾನ ಆರಂಭಿಸಲಿದ್ದು, ಈ ಸಂದರ್ಭದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್‌ ರಾವತ್‌ ಕೂಡ ಹಾಜರಿರಲಿದ್ದಾರೆ. 'ಇದೊಂದು ಐತಿಹಾಸಿಕ ಸಂದರ್ಭ. ಇದೇ ಮೊದಲ ಬಾರಿ ಇಷ್ಟೊಂದು ಸಂಪೂರ್ಣ ಪ್ರಮಾಣದಲ್ಲಿ ನದಿಯೊಂದನ್ನು ಶುದ್ಧೀಕರಿಸಲಾಗುತ್ತಿದೆ.

ಅಕ್ಟೋಬರ್‌ 2016ರ ವೇಳೆಗೆ ಮೊದಲ ಹಂತ ಮುಗಿಯಲಿದೆ. 2ನೇ ಹಂತದ ಶುದ್ಧೀಕರಣಕ್ಕೆ 2 ವರ್ಷ ಹಿಡಿಯಲಿದೆ' ಎಂದು ಉಮಾ ತಿಳಿಸಿದರು. ಗಂಗಾ ನದಿ ಧಾರ್ಮಿಕ ಮಹತ್ವ ಪಡೆದಿದ್ದು, ಜನರ ನಂಬಿಕೆಗೆ ಧಕ್ಕೆಯಾಗದಂತೆ ಯೋಜನೆ ಕೈಗೆತ್ತಿಕೊಳ್ಳಲಾಗುತ್ತುದ್ದು, ವಿಶ್ವದಲ್ಲಿ ಲಭ್ಯವಿರುವ ಎಲ್ಲ ಉನ್ನತ ತಂತ್ರಜ್ಞಾನ ಬಳಸಿ ಶುದ್ಧೀಕರಣ ನಡೆಸಲಾಗುತ್ತಿದೆ.

ಗಂಗಾ ಕಾಯ್ದೆ ಎಂಬ ಪ್ರತ್ಯೇಕ ಕಾಯ್ದೆಯನ್ನೂ ತರುವ ಇರಾದೆ ಸರ್ಕಾರದ್ದು. ಇದಕ್ಕೆ ರಾಜ್ಯಗಳ ಸಹಕಾರ ಪಡೆಯಲಾಗುವುದು. ಯೋಜನೆ ಉದ್ಘಾಟನೆ ವೇಳೆ ನಮಾಮಿ ಗಂಗೆ ವೆಬ್‌ಸೈಟ್‌ ಮತ್ತು ಮೊಬೈಲ್‌ ಆ್ಯಪ್‌ಗೆ ಚಾಲನೆ ನೀಡಲಾಗುವುದು ಎಂದು ಉಮಾ ಭಾರತಿ ತಿಳಿಸಿದ್ದಾರೆ.

ಯೋಜನೆಯ ವಿಶೇಷತೆಗಳು:
> ಗಂಗಾ ನದಿ ತಟದ 104 ಕಡೆ ಯೋಜನೆ ಆರಂಭ.
> ಗಂಗೆಯ ಮಾಲಿನ್ಯವನ್ನು ಅಳೆಯಲು ಅಪ್ಲಿಕೇಶನ್‌ ಮಾನಿಟರ್‌ ಸ್ಥಾಪನೆ

> ಗಂಗಾ ನದಿಯಲ್ಲಿ ಹೆಣಗಳನ್ನು ತೇಲಿ ಬಿಡುವುದನ್ನು ತಡೆಯಲು ನದಿ ತಟದಲ್ಲಿ ಶವಸಂಸ್ಕಾರಕ್ಕೆ ಮೋಕ್ಷಧಾಮ ನಿರ್ಮಾಣ

> ನದಿ ದಂಡೆಯಲ್ಲಿರುವ ಕಾರ್ಖಾನೆಗಳ ತ್ಯಾಜ್ಯ ಸಂಸ್ಕರಣೆ ಮತ್ತು ಮರುಬಳಕೆ

> ನದಿ ಪಾತ್ರದಲ್ಲಿ ಪರಿಸರ ರಕ್ಷಣೆಗೆ ಗಿಡ ನೆಡುವಿಕೆ, ಇದಕ್ಕಾಗಿ 1.34 ಲಕ್ಷ ಹೆಕ್ಟೇರ್‌ನಲ್ಲಿ 2000 ಕೋಟಿ ವೆಚ್ಚದಲ್ಲಿ ವನಮಹೋತ್ಸವ

> 5 ವರ್ಷದ ಯೋಜನೆಗೆ 20 ಸಾವಿರ ಕೋಟಿ ಮೀಸಲು

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited